ಹನೂರು : ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವುದನ್ನು ಶಾಸಕ ಆರ್.ನರೇಂದ್ರ ವಿರೋಧಿಸಿದ್ದು ಸರ್ಕಾರದ ಹಣದಲ್ಲಿ ಬಿಜೆಪಿ ಚಿಹ್ನೆಯಂತಿರುವ ಕೇಸರಿ ಬಣ್ಣ ಹಾಕುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ಜಿ. ವಿ.ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಯಾವುದೇ ಒಂದು ಪಕ್ಷ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಚಿನ್ಹೆ ಬಳಸಬೇಕು. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಕಾಂಗ್ರೆಸ್ ಚಿಹ್ನೆ ಜಾ.ದಳ ಅಧಿಕಾರಕ್ಕೆ ಬಂದರೆ ಅದರ ಚಿಹ್ನೆ ಬಿಜೆಪಿ ಬಂದರೆ ಕಮಲದ ಚಿಹ್ನೆ ಬಣ್ಣ ಬಳಿಸುವುದು ತಪ್ಪು ಎಂದರು.
ಸರ್ಕಾರ ನಡೆಸುವುದು ಜನರ ಆದಾಯದಿಂದ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಶಾಲೆಗೆ ಚೆನ್ನಾಗಿ ಕಾಣಲು ಯಾವ ಬಣ್ಣ ಬಳಸಬೇಕು ಅದನ್ನು ಬಳಸಬೇಕು. ಇದುವರೆಗೂ ಯಾವುದೇ ಒಂದು ಸರ್ಕಾರ ತಮ್ಮ ಪಕ್ಷಗಳ ಚಿಹ್ನೆಯ ಬಣ್ಣವನ್ನು ಬಳಿಸಿಲ್ಲ. ಈಗಿನ ಬಿಜೆಪಿ ಸರ್ಕಾರ ಕಮಲದ ಚಿಹ್ನೆ ಕೇಸರಿ ಎಂದು ಬಣ್ಣ ಬಳಿಯುವ ಯೋಚನೆ ಮಾಡಿರುವುದು ತಪ್ಪು. ಬಿಜೆಪಿಯವರು ಬೇಕಿದ್ದರೆ ತಮ್ಮ ಸ್ವಂತ ಹಣದಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಿ ಯಾವ ಬಣ್ಣ ಬೇಕಾದರು ಬಳಸಿಕೊಳ್ಳಲಿ ಇದನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಉದ್ದೇಶಪೂರ್ವಕವಾಗಿ ಕೇಸರಿ ಬಣ್ಣ ಬಳೆಯುವುದಕ್ಕೆ ನನ್ನ ಆಕ್ಷೇಪವಿದೆ ಎಂದರು.
ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…
ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…
ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…