ಹನೂರು : ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವುದನ್ನು ಶಾಸಕ ಆರ್.ನರೇಂದ್ರ ವಿರೋಧಿಸಿದ್ದು ಸರ್ಕಾರದ ಹಣದಲ್ಲಿ ಬಿಜೆಪಿ ಚಿಹ್ನೆಯಂತಿರುವ ಕೇಸರಿ ಬಣ್ಣ ಹಾಕುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ಜಿ. ವಿ.ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಯಾವುದೇ ಒಂದು ಪಕ್ಷ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಚಿನ್ಹೆ ಬಳಸಬೇಕು. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಕಾಂಗ್ರೆಸ್ ಚಿಹ್ನೆ ಜಾ.ದಳ ಅಧಿಕಾರಕ್ಕೆ ಬಂದರೆ ಅದರ ಚಿಹ್ನೆ ಬಿಜೆಪಿ ಬಂದರೆ ಕಮಲದ ಚಿಹ್ನೆ ಬಣ್ಣ ಬಳಿಸುವುದು ತಪ್ಪು ಎಂದರು.
ಸರ್ಕಾರ ನಡೆಸುವುದು ಜನರ ಆದಾಯದಿಂದ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಶಾಲೆಗೆ ಚೆನ್ನಾಗಿ ಕಾಣಲು ಯಾವ ಬಣ್ಣ ಬಳಸಬೇಕು ಅದನ್ನು ಬಳಸಬೇಕು. ಇದುವರೆಗೂ ಯಾವುದೇ ಒಂದು ಸರ್ಕಾರ ತಮ್ಮ ಪಕ್ಷಗಳ ಚಿಹ್ನೆಯ ಬಣ್ಣವನ್ನು ಬಳಿಸಿಲ್ಲ. ಈಗಿನ ಬಿಜೆಪಿ ಸರ್ಕಾರ ಕಮಲದ ಚಿಹ್ನೆ ಕೇಸರಿ ಎಂದು ಬಣ್ಣ ಬಳಿಯುವ ಯೋಚನೆ ಮಾಡಿರುವುದು ತಪ್ಪು. ಬಿಜೆಪಿಯವರು ಬೇಕಿದ್ದರೆ ತಮ್ಮ ಸ್ವಂತ ಹಣದಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಿ ಯಾವ ಬಣ್ಣ ಬೇಕಾದರು ಬಳಸಿಕೊಳ್ಳಲಿ ಇದನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಉದ್ದೇಶಪೂರ್ವಕವಾಗಿ ಕೇಸರಿ ಬಣ್ಣ ಬಳೆಯುವುದಕ್ಕೆ ನನ್ನ ಆಕ್ಷೇಪವಿದೆ ಎಂದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…