ಹನೂರು : ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವುದನ್ನು ಶಾಸಕ ಆರ್.ನರೇಂದ್ರ ವಿರೋಧಿಸಿದ್ದು ಸರ್ಕಾರದ ಹಣದಲ್ಲಿ ಬಿಜೆಪಿ ಚಿಹ್ನೆಯಂತಿರುವ ಕೇಸರಿ ಬಣ್ಣ ಹಾಕುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ಜಿ. ವಿ.ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಯಾವುದೇ ಒಂದು ಪಕ್ಷ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಚಿನ್ಹೆ ಬಳಸಬೇಕು. ಅದನ್ನು ಹೊರತುಪಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಕಾಂಗ್ರೆಸ್ ಚಿಹ್ನೆ ಜಾ.ದಳ ಅಧಿಕಾರಕ್ಕೆ ಬಂದರೆ ಅದರ ಚಿಹ್ನೆ ಬಿಜೆಪಿ ಬಂದರೆ ಕಮಲದ ಚಿಹ್ನೆ ಬಣ್ಣ ಬಳಿಸುವುದು ತಪ್ಪು ಎಂದರು.
ಸರ್ಕಾರ ನಡೆಸುವುದು ಜನರ ಆದಾಯದಿಂದ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಶಾಲೆಗೆ ಚೆನ್ನಾಗಿ ಕಾಣಲು ಯಾವ ಬಣ್ಣ ಬಳಸಬೇಕು ಅದನ್ನು ಬಳಸಬೇಕು. ಇದುವರೆಗೂ ಯಾವುದೇ ಒಂದು ಸರ್ಕಾರ ತಮ್ಮ ಪಕ್ಷಗಳ ಚಿಹ್ನೆಯ ಬಣ್ಣವನ್ನು ಬಳಿಸಿಲ್ಲ. ಈಗಿನ ಬಿಜೆಪಿ ಸರ್ಕಾರ ಕಮಲದ ಚಿಹ್ನೆ ಕೇಸರಿ ಎಂದು ಬಣ್ಣ ಬಳಿಯುವ ಯೋಚನೆ ಮಾಡಿರುವುದು ತಪ್ಪು. ಬಿಜೆಪಿಯವರು ಬೇಕಿದ್ದರೆ ತಮ್ಮ ಸ್ವಂತ ಹಣದಿಂದ ಶಾಲೆಗಳನ್ನು ಅಭಿವೃದ್ಧಿಪಡಿಸಿ ಯಾವ ಬಣ್ಣ ಬೇಕಾದರು ಬಳಸಿಕೊಳ್ಳಲಿ ಇದನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಉದ್ದೇಶಪೂರ್ವಕವಾಗಿ ಕೇಸರಿ ಬಣ್ಣ ಬಳೆಯುವುದಕ್ಕೆ ನನ್ನ ಆಕ್ಷೇಪವಿದೆ ಎಂದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…