ಮೈಸೂರು : ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ (ರಿ) ವತಿಯಿಂದ ರಾಜ್ಯಾಧ್ಯಕ್ಷರಾದ ಪಿ.ರಾಜು ರವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ನಡೆಯಿತು.
ಕಟ್ಟಡ ಕಾರ್ಮಿಕರು ಸವಲತ್ತುಗಳನ್ನು ಪಡೆಯಲು ಮಧ್ಯವರ್ತಿಗಳ ಅಶ್ರಯಪಡೆದು ಶೋಷಣೆಗೆ ಒಳಪಡುವುದು ಸಾಮಾನ್ಯವಾಗಿರುವ ಈ ಸಂದರ್ಭದಲ್ಲಿ ನಮ್ಮ ಸಂಘಟನೆ ಜಿಲ್ಲಾ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಎರಡು ಘಂಟೆ ಸಮಯ ಶ್ರಮಿಕ ಕಟ್ಟಡಕಾರ್ಮಿಕರ ಸೇವೆಗೆ ಮೀಸಲಿಟ್ಟು ಅವರನ್ನು ಮಧ್ಯವರ್ತಿಗಳ ಶೋಷಣೆಯಿಂದ ರಕ್ಷಿಸಿ ನೇರವಾಗಲು ಕರೆನೀಡಲಾಯಿತು.ಎಲ್ಲಾ ನೊಂದಾಯಿತ ಕಟ್ಟಡ ಕಾರ್ಮಿಕರು ಎಲ್ಲಾ ಜಿಲ್ಲಾ ತಾಲೂಕು ಅಧ್ಯಕ್ಷ ಪದಾಧಿಕಾರಿಗಳನ್ನು ಸಂಪರ್ಕಿಸಿ 100 ನೀಡಿ ಅಜೀವ ಸದಸ್ಯತ್ವ ನಮ್ಮ ಸಂಘದಲ್ಲಿ ಪಡೆದು ಮಧ್ಯವರ್ತಿಗಳ ವಂಚನೆಗೊಳಗಾಗದೆ ನಮ್ಮ ಸಂಘದ ಉಚಿತ ಸೇವೆಯನ್ನು ಬಳಸಿಕೊಳ್ಳಲು ಈ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತಿರ್ಮಾನಿಸಿ ಕಟ್ಟಡ ಕಾರ್ಮಿಕರಲ್ಲಿ ಮನವಿಮಾಡಲು ನಿರ್ಣಯಿಸಲಾಯಿತು ಹಾಗೂ ಎಲ್ಲಾ ಜಿಲ್ಲಾ, ತಾಲೂಕು ಮಟ್ಟದಲ್ಲಿ ನಮ್ಮ ಸಂಘಟನೆ ನಾಮಫಲಕ ಅಳವಡಿಸಿ ಉಚಿತ ಸೇವೆ ಎಂಬುದನ್ನು ಮನವರಿಕೆ ಮಾಡುವುದರ ಜೊತೆಯಲ್ಲಿ ಕಟ್ಟಡ ಕಾರ್ಮಿಕರ ಸಮ್ಮೀಲನ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ಒಮ್ಮತದಿಂದ ನಿರ್ಣಯವನ್ನು ಸಹ ಅಂಗಿಕರಿಸಲಾಯಿತು.
ಈ ಸಭೆಯಲ್ಲಿ ಮೈಸೂರು ಜಿಲ್ಲಾಧ್ಯಾಕ್ಷ ಕಾಂತರಾಜು, ಚಾಮರಾಜನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಾಗರಾಜ್, ಹಾವೇರಿ ಜಿಲ್ಲಾಧ್ಯಕ್ಷ ರಮೇಶ್, ಬಿಜಾಪುರ ಜಿಲ್ಲಾಧ್ಯಕ್ಷ ಸುರೇಶ್, ಕೊಡಗು ಜಿಲ್ಲಾಧ್ಯಕ್ಷ ವಿರೇಂದ್ರ, ಹಾಸನ ಜಿಲ್ಲಾಧ್ಯಕ್ಷ ಲೋಕೇಶ್ ಕುಮಾರ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಸಂತೋಷ್, ಬಳ್ಳಾರಿ ಜಿಲ್ಲಾಧ್ಯಕ್ಷ ಅಂಜಿನೇಯಾ,ಗದಗ ಜಿಲ್ಲಾಧ್ಯಕ್ಷ ರಾಮಪ್ಪ, ಬೆಂಗಳೂರು ಜಿಲ್ಲಾಧ್ಯಕ್ಷ ಮದಿಅಳಗನ್,ಬೆಳಗಾವಿ ಜಿಲ್ಲಾಧ್ಯಕ್ಷ ಸುರೇಶ್ ಸಮನಿ, ದಾವಣಗೆರೆ ಜಿಲ್ಲಾಧ್ಯಕ್ಷ ಬಸವರಾಜು, ರಾಜ್ಯ ಉಪಾಧ್ಯಕ್ಷ ವೇಣುಗೋಪಾಲ್,ರಾಜ್ಯ ಪ್ರಧಾನ ಕಾರ್ಯದರ್ಶಿ ಕಗ ಶಿವಕುಮಾರ್, ರಾಜ್ಯ ಸಂಚಾಲಕ ಸಿದ್ದಪ್ಪ,ರಾಜ್ಯ ನಿರ್ಥೇಶಕ ಪುಟ್ಟಮಾದಯ್ಯ,ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಚಿತ್ರದುರ್ಗ ನಗರಧ್ಯಕ್ಷರು ಚಂದ್ರು, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಶಾಂತಕುಮಾರ್ ಎನ್ ಆರ್ ಕ್ಷೇತ್ರದ ಅಧ್ಯಕ್ಷ ಯೂಸಫ್,ಚಾಮರಾಜ ಕ್ಷೇತ್ರ ಅಧ್ಯಕ್ಷ ಚಂದ್ರು,ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಗಣೇಶ್ ಮೂರ್ತಿ, ಪತ್ರಿಕಾ ಕಾರ್ಯಧರ್ಶಿ ಸುರೇಶ್, ಅಂಕಣ್ಣ,ಸಿದ್ದಪಾಜೀ,ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡ ಸ್ವಾಮಿ, ನಂಜನಗೂಡು ತಾಲೂಕು ಅಧ್ಯಕ್ಷ ರಾಜಶೇಖರ್ ಸೇರಿದಂತೆ ಇತರೆ ನಮ್ಮ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…