ಜಿಲ್ಲೆಗಳು

ಪಿ.ರಾಜು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿ ಸಭೆ

ಮೈಸೂರು : ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ (ರಿ) ವತಿಯಿಂದ ರಾಜ್ಯಾಧ್ಯಕ್ಷರಾದ ಪಿ.ರಾಜು ರವರ ಅಧ್ಯಕ್ಷತೆಯಲ್ಲಿ  ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ನಡೆಯಿತು.
ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಅಧ್ಯಕ್ಷರು ಪದಾಧಿಕಾರಿಗಳಿಗೆ ನೈಜ ಕಟ್ಟಡ ಕಾರ್ಮಿಕರು ನಮ್ಮ ಹೋರಾಟದ ಫಲವಾಗಿ ಲಭಿಸಿರುವ ಸವಲತ್ತುಗಳನ್ನು ಪಡೆಯಲು ಮಾರ್ಗದರ್ಶನ ಮಾಡಿ ಈ ಸವಲತ್ತುಗಳು ನೈಜ ಕಟ್ಟಡ ಕಾರ್ಮಿಕರು ಅವರ ಕುಟುಂಬ ಪಡೆಯಲು ನಮ್ಮ ಸಂಘಟನೆ ಉಚಿತ ಸೇವೆ ಮಾನದಂಡ ಇರಿಸಿಕೊಂಡು ಶ್ರಮಿಸುವ ಕಾರ್ಯಕ್ಕೆ ಭಾಗವಹಿಸಿದ್ದ ಸಂಘಟನೆಯ ಎಲ್ಲಾ ರೂವಾರಿಗಳಲ್ಲಿ ಮನವಿಮಾಡಲಾಯಿತು.

ಕಟ್ಟಡ ಕಾರ್ಮಿಕರು ಸವಲತ್ತುಗಳನ್ನು ಪಡೆಯಲು ಮಧ್ಯವರ್ತಿಗಳ ಅಶ್ರಯಪಡೆದು ಶೋಷಣೆಗೆ ಒಳಪಡುವುದು ಸಾಮಾನ್ಯವಾಗಿರುವ ಈ ಸಂದರ್ಭದಲ್ಲಿ ನಮ್ಮ ಸಂಘಟನೆ ಜಿಲ್ಲಾ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಎರಡು ಘಂಟೆ ಸಮಯ ಶ್ರಮಿಕ ಕಟ್ಟಡಕಾರ್ಮಿಕರ ಸೇವೆಗೆ ಮೀಸಲಿಟ್ಟು ಅವರನ್ನು ಮಧ್ಯವರ್ತಿಗಳ ಶೋಷಣೆಯಿಂದ ರಕ್ಷಿಸಿ ನೇರವಾಗಲು ಕರೆನೀಡಲಾಯಿತು.ಎಲ್ಲಾ ನೊಂದಾಯಿತ ಕಟ್ಟಡ ಕಾರ್ಮಿಕರು ಎಲ್ಲಾ ಜಿಲ್ಲಾ ತಾಲೂಕು ಅಧ್ಯಕ್ಷ ಪದಾಧಿಕಾರಿಗಳನ್ನು ಸಂಪರ್ಕಿಸಿ 100 ನೀಡಿ ಅಜೀವ ಸದಸ್ಯತ್ವ ನಮ್ಮ ಸಂಘದಲ್ಲಿ ಪಡೆದು ಮಧ್ಯವರ್ತಿಗಳ ವಂಚನೆಗೊಳಗಾಗದೆ ನಮ್ಮ ಸಂಘದ ಉಚಿತ ಸೇವೆಯನ್ನು ಬಳಸಿಕೊಳ್ಳಲು ಈ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತಿರ್ಮಾನಿಸಿ ಕಟ್ಟಡ ಕಾರ್ಮಿಕರಲ್ಲಿ ಮನವಿಮಾಡಲು ನಿರ್ಣಯಿಸಲಾಯಿತು ಹಾಗೂ ಎಲ್ಲಾ ಜಿಲ್ಲಾ, ತಾಲೂಕು ಮಟ್ಟದಲ್ಲಿ ನಮ್ಮ ಸಂಘಟನೆ ನಾಮಫಲಕ ಅಳವಡಿಸಿ ಉಚಿತ ಸೇವೆ ಎಂಬುದನ್ನು ಮನವರಿಕೆ ಮಾಡುವುದರ ಜೊತೆಯಲ್ಲಿ ಕಟ್ಟಡ ಕಾರ್ಮಿಕರ ಸಮ್ಮೀಲನ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ಒಮ್ಮತದಿಂದ ನಿರ್ಣಯವನ್ನು ಸಹ ಅಂಗಿಕರಿಸಲಾಯಿತು.

ಈ ಸಭೆಯಲ್ಲಿ ಮೈಸೂರು ಜಿಲ್ಲಾಧ್ಯಾಕ್ಷ ಕಾಂತರಾಜು, ಚಾಮರಾಜನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಾಗರಾಜ್, ಹಾವೇರಿ ಜಿಲ್ಲಾಧ್ಯಕ್ಷ ರಮೇಶ್, ಬಿಜಾಪುರ ಜಿಲ್ಲಾಧ್ಯಕ್ಷ ಸುರೇಶ್, ಕೊಡಗು ಜಿಲ್ಲಾಧ್ಯಕ್ಷ ವಿರೇಂದ್ರ, ಹಾಸನ ಜಿಲ್ಲಾಧ್ಯಕ್ಷ ಲೋಕೇಶ್ ಕುಮಾರ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಸಂತೋಷ್, ಬಳ್ಳಾರಿ ಜಿಲ್ಲಾಧ್ಯಕ್ಷ ಅಂಜಿನೇಯಾ,ಗದಗ ಜಿಲ್ಲಾಧ್ಯಕ್ಷ ರಾಮಪ್ಪ, ಬೆಂಗಳೂರು ಜಿಲ್ಲಾಧ್ಯಕ್ಷ ಮದಿಅಳಗನ್,ಬೆಳಗಾವಿ ಜಿಲ್ಲಾಧ್ಯಕ್ಷ ಸುರೇಶ್ ಸಮನಿ, ದಾವಣಗೆರೆ ಜಿಲ್ಲಾಧ್ಯಕ್ಷ ಬಸವರಾಜು, ರಾಜ್ಯ ಉಪಾಧ್ಯಕ್ಷ ವೇಣುಗೋಪಾಲ್,ರಾಜ್ಯ ಪ್ರಧಾನ ಕಾರ್ಯದರ್ಶಿ ಕಗ ಶಿವಕುಮಾರ್, ರಾಜ್ಯ ಸಂಚಾಲಕ ಸಿದ್ದಪ್ಪ,ರಾಜ್ಯ ನಿರ್ಥೇಶಕ ಪುಟ್ಟಮಾದಯ್ಯ,ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಚಿತ್ರದುರ್ಗ ನಗರಧ್ಯಕ್ಷರು ಚಂದ್ರು, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಶಾಂತಕುಮಾರ್ ಎನ್ ಆರ್ ಕ್ಷೇತ್ರದ ಅಧ್ಯಕ್ಷ ಯೂಸಫ್,ಚಾಮರಾಜ ಕ್ಷೇತ್ರ ಅಧ್ಯಕ್ಷ ಚಂದ್ರು,ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಗಣೇಶ್ ಮೂರ್ತಿ, ಪತ್ರಿಕಾ ಕಾರ್ಯಧರ್ಶಿ ಸುರೇಶ್, ಅಂಕಣ್ಣ,ಸಿದ್ದಪಾಜೀ,ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡ ಸ್ವಾಮಿ, ನಂಜನಗೂಡು ತಾಲೂಕು ಅಧ್ಯಕ್ಷ ರಾಜಶೇಖರ್ ಸೇರಿದಂತೆ ಇತರೆ ನಮ್ಮ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು

andolanait

Recent Posts

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

11 mins ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

18 mins ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

58 mins ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

1 hour ago

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

4 hours ago