ಜಿಲ್ಲೆಗಳು

ಪಿ.ರಾಜು ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿಣಿ ಸಭೆ

ಮೈಸೂರು : ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ (ರಿ) ವತಿಯಿಂದ ರಾಜ್ಯಾಧ್ಯಕ್ಷರಾದ ಪಿ.ರಾಜು ರವರ ಅಧ್ಯಕ್ಷತೆಯಲ್ಲಿ  ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ನಡೆಯಿತು.
ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಅಧ್ಯಕ್ಷರು ಪದಾಧಿಕಾರಿಗಳಿಗೆ ನೈಜ ಕಟ್ಟಡ ಕಾರ್ಮಿಕರು ನಮ್ಮ ಹೋರಾಟದ ಫಲವಾಗಿ ಲಭಿಸಿರುವ ಸವಲತ್ತುಗಳನ್ನು ಪಡೆಯಲು ಮಾರ್ಗದರ್ಶನ ಮಾಡಿ ಈ ಸವಲತ್ತುಗಳು ನೈಜ ಕಟ್ಟಡ ಕಾರ್ಮಿಕರು ಅವರ ಕುಟುಂಬ ಪಡೆಯಲು ನಮ್ಮ ಸಂಘಟನೆ ಉಚಿತ ಸೇವೆ ಮಾನದಂಡ ಇರಿಸಿಕೊಂಡು ಶ್ರಮಿಸುವ ಕಾರ್ಯಕ್ಕೆ ಭಾಗವಹಿಸಿದ್ದ ಸಂಘಟನೆಯ ಎಲ್ಲಾ ರೂವಾರಿಗಳಲ್ಲಿ ಮನವಿಮಾಡಲಾಯಿತು.

ಕಟ್ಟಡ ಕಾರ್ಮಿಕರು ಸವಲತ್ತುಗಳನ್ನು ಪಡೆಯಲು ಮಧ್ಯವರ್ತಿಗಳ ಅಶ್ರಯಪಡೆದು ಶೋಷಣೆಗೆ ಒಳಪಡುವುದು ಸಾಮಾನ್ಯವಾಗಿರುವ ಈ ಸಂದರ್ಭದಲ್ಲಿ ನಮ್ಮ ಸಂಘಟನೆ ಜಿಲ್ಲಾ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳು ಎರಡು ಘಂಟೆ ಸಮಯ ಶ್ರಮಿಕ ಕಟ್ಟಡಕಾರ್ಮಿಕರ ಸೇವೆಗೆ ಮೀಸಲಿಟ್ಟು ಅವರನ್ನು ಮಧ್ಯವರ್ತಿಗಳ ಶೋಷಣೆಯಿಂದ ರಕ್ಷಿಸಿ ನೇರವಾಗಲು ಕರೆನೀಡಲಾಯಿತು.ಎಲ್ಲಾ ನೊಂದಾಯಿತ ಕಟ್ಟಡ ಕಾರ್ಮಿಕರು ಎಲ್ಲಾ ಜಿಲ್ಲಾ ತಾಲೂಕು ಅಧ್ಯಕ್ಷ ಪದಾಧಿಕಾರಿಗಳನ್ನು ಸಂಪರ್ಕಿಸಿ 100 ನೀಡಿ ಅಜೀವ ಸದಸ್ಯತ್ವ ನಮ್ಮ ಸಂಘದಲ್ಲಿ ಪಡೆದು ಮಧ್ಯವರ್ತಿಗಳ ವಂಚನೆಗೊಳಗಾಗದೆ ನಮ್ಮ ಸಂಘದ ಉಚಿತ ಸೇವೆಯನ್ನು ಬಳಸಿಕೊಳ್ಳಲು ಈ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತಿರ್ಮಾನಿಸಿ ಕಟ್ಟಡ ಕಾರ್ಮಿಕರಲ್ಲಿ ಮನವಿಮಾಡಲು ನಿರ್ಣಯಿಸಲಾಯಿತು ಹಾಗೂ ಎಲ್ಲಾ ಜಿಲ್ಲಾ, ತಾಲೂಕು ಮಟ್ಟದಲ್ಲಿ ನಮ್ಮ ಸಂಘಟನೆ ನಾಮಫಲಕ ಅಳವಡಿಸಿ ಉಚಿತ ಸೇವೆ ಎಂಬುದನ್ನು ಮನವರಿಕೆ ಮಾಡುವುದರ ಜೊತೆಯಲ್ಲಿ ಕಟ್ಟಡ ಕಾರ್ಮಿಕರ ಸಮ್ಮೀಲನ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ಒಮ್ಮತದಿಂದ ನಿರ್ಣಯವನ್ನು ಸಹ ಅಂಗಿಕರಿಸಲಾಯಿತು.

ಈ ಸಭೆಯಲ್ಲಿ ಮೈಸೂರು ಜಿಲ್ಲಾಧ್ಯಾಕ್ಷ ಕಾಂತರಾಜು, ಚಾಮರಾಜನಗರ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಾಗರಾಜ್, ಹಾವೇರಿ ಜಿಲ್ಲಾಧ್ಯಕ್ಷ ರಮೇಶ್, ಬಿಜಾಪುರ ಜಿಲ್ಲಾಧ್ಯಕ್ಷ ಸುರೇಶ್, ಕೊಡಗು ಜಿಲ್ಲಾಧ್ಯಕ್ಷ ವಿರೇಂದ್ರ, ಹಾಸನ ಜಿಲ್ಲಾಧ್ಯಕ್ಷ ಲೋಕೇಶ್ ಕುಮಾರ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಸಂತೋಷ್, ಬಳ್ಳಾರಿ ಜಿಲ್ಲಾಧ್ಯಕ್ಷ ಅಂಜಿನೇಯಾ,ಗದಗ ಜಿಲ್ಲಾಧ್ಯಕ್ಷ ರಾಮಪ್ಪ, ಬೆಂಗಳೂರು ಜಿಲ್ಲಾಧ್ಯಕ್ಷ ಮದಿಅಳಗನ್,ಬೆಳಗಾವಿ ಜಿಲ್ಲಾಧ್ಯಕ್ಷ ಸುರೇಶ್ ಸಮನಿ, ದಾವಣಗೆರೆ ಜಿಲ್ಲಾಧ್ಯಕ್ಷ ಬಸವರಾಜು, ರಾಜ್ಯ ಉಪಾಧ್ಯಕ್ಷ ವೇಣುಗೋಪಾಲ್,ರಾಜ್ಯ ಪ್ರಧಾನ ಕಾರ್ಯದರ್ಶಿ ಕಗ ಶಿವಕುಮಾರ್, ರಾಜ್ಯ ಸಂಚಾಲಕ ಸಿದ್ದಪ್ಪ,ರಾಜ್ಯ ನಿರ್ಥೇಶಕ ಪುಟ್ಟಮಾದಯ್ಯ,ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಚಿತ್ರದುರ್ಗ ನಗರಧ್ಯಕ್ಷರು ಚಂದ್ರು, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಶಾಂತಕುಮಾರ್ ಎನ್ ಆರ್ ಕ್ಷೇತ್ರದ ಅಧ್ಯಕ್ಷ ಯೂಸಫ್,ಚಾಮರಾಜ ಕ್ಷೇತ್ರ ಅಧ್ಯಕ್ಷ ಚಂದ್ರು,ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಗಣೇಶ್ ಮೂರ್ತಿ, ಪತ್ರಿಕಾ ಕಾರ್ಯಧರ್ಶಿ ಸುರೇಶ್, ಅಂಕಣ್ಣ,ಸಿದ್ದಪಾಜೀ,ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡ ಸ್ವಾಮಿ, ನಂಜನಗೂಡು ತಾಲೂಕು ಅಧ್ಯಕ್ಷ ರಾಜಶೇಖರ್ ಸೇರಿದಂತೆ ಇತರೆ ನಮ್ಮ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago