ಜಿಲ್ಲೆಗಳು

ಪ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಸಂಘಟನೆಗಳ ದೂರು

ಮೈಸೂರು: ಬ್ರಾಹ್ಮಣರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿರುವ ವಿಚಾರವಾದಿ ಪ.ಮಲ್ಲೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಬ್ರಾಹ್ಮಣ ಸಂಘಟನೆಗಳ ಒಕ್ಕೂಟದಿಂದ ಗುರುವಾರ ದೂರು ದಾಖಲಿಸಲಾಗಿದೆ.
ಈ ವೇಳೆ ಮಾತನಾಡಿದ ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಮಲ್ಲೇಶ್ ಅವರಿಗೆ ವಯೋ ಸಹಜ ಅರಳು ಮರುಳು ಎನ್ನುವಂತಾಗಿದೆ. ಅತೀ ಬುದ್ದಿವಂತರಂತೆ ವರ್ತಿಸುವ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಂತರ ಬಾಯ್ತಪ್ಪಿನಿಂದ ಹೇಳಿದೆ ಎನ್ನುತ್ತಾರೆ. ಇಂತಹ ನಾಟಕವನ್ನು ಬಿಡಬೇಕು ಎಂದರು.
ಅವರು ವಿಚಾರವಾದಿ ಎಂದು ಹೇಳಿಕೊಂಡು ಸಮುದಾಯಗಳನ್ನು ಟೀಕಿಸುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಈ ರೀತಿಯಾಗಿ ಮಾತನಾಡಿ ಅವರ ಮರ್ಯಾದೆಯನ್ನೂ ಹಾಳು ಮಾಡಿದ್ದೀರಿ ಎಂದರು.
ಧಾರ್ಮಿಕ ಮುಖಂಡರಾದ ಡಾ. ಭಾನುಪ್ರಕಾಶ್ ಶರ್ಮ, ಬಿಜೆಪಿ ನಗರಾಧ್ಯಕ್ಷರಾದ ಟಿ.ಎಸ್.ಶ್ರೀವತ್ಸ, ವಿಪ್ರ ಮುಖಂಡರಾದ ಎಚ್.ವಿ.ರಾಜೀವ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಆದರ್ಶ ಸಂಘದ ಅಧ್ಯಕ್ಷ ಜಿ.ಆರ್.ನಾಗರಾಜ್, ವಿಪ್ರ ಪ್ರೊಫೆಷನಲ್ ಫೋರಂ ಅಧ್ಯಕ್ಷ ಎಸ್.ಭಾಷ್ಯಂ, ಸುಧೀಂದ್ರ, ಕೆ.ಆರ್.ಸತ್ಯನಾರಾಯಣ್, ರಾಕೇಶ್ ಭಟ್, ಎಚ್.ಜಿ.ಗಿರಿಧರ್ ಜಯಸಿಂಹ, ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಮುಖಂಡರಾದ ಲತಾ ಮೋಹನ್, ಜೆಡಿಎಸ್ ಯುವ ಮುಖಂಡರಾದ ವಿಜಯಕುಮಾರ್, ನಾಗೇಂದ್ರ ಬಾಬು, ಯೋಗ ನರಸಿಂಹ ಮುರಳಿ, ಹೊಯ್ಸಳ ಕರ್ನಾಟಕದ ರಂಗನಾಥ್, ವಕೀಲರಾದ ಶೇಷಗಿರಿ, ವಿಪ್ರ ಮಹಿಳಾ ಸಂಘದ ಅಧ್ಯಕ್ಷರಾದ ಡಾಕ್ಟರ್ ಲಕ್ಷ್ಮೀದೇವಿ, ಮಾಜಿ ನಗರಪಾಲಿಕೆ ಸದಸ್ಯರಾದ ಸೌಭಾಗ್ಯ ಮೂರ್ತಿ, ಕಡಕೋಳ ಜಗದೀಶ್, ವಿವೇಕಾನಂದ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಜಯರಾಮ್, ಓಂ ಶ್ರೀನಿವಾಸ ಇನ್ನಿತರ ವಿಪ್ರ ಮುಖಂಡರು ಹಾಜರಿದ್ದರು.

andolanait

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

1 hour ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

2 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

2 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

2 hours ago