ಜಿಲ್ಲೆಗಳು

ಪ.ಮಲ್ಲೇಶ್ ವಿರುದ್ಧ ಬ್ರಾಹ್ಮಣ ಸಂಘಟನೆಗಳ ದೂರು

ಮೈಸೂರು: ಬ್ರಾಹ್ಮಣರ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿರುವ ವಿಚಾರವಾದಿ ಪ.ಮಲ್ಲೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಬ್ರಾಹ್ಮಣ ಸಂಘಟನೆಗಳ ಒಕ್ಕೂಟದಿಂದ ಗುರುವಾರ ದೂರು ದಾಖಲಿಸಲಾಗಿದೆ.
ಈ ವೇಳೆ ಮಾತನಾಡಿದ ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಮಲ್ಲೇಶ್ ಅವರಿಗೆ ವಯೋ ಸಹಜ ಅರಳು ಮರುಳು ಎನ್ನುವಂತಾಗಿದೆ. ಅತೀ ಬುದ್ದಿವಂತರಂತೆ ವರ್ತಿಸುವ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ನಂತರ ಬಾಯ್ತಪ್ಪಿನಿಂದ ಹೇಳಿದೆ ಎನ್ನುತ್ತಾರೆ. ಇಂತಹ ನಾಟಕವನ್ನು ಬಿಡಬೇಕು ಎಂದರು.
ಅವರು ವಿಚಾರವಾದಿ ಎಂದು ಹೇಳಿಕೊಂಡು ಸಮುದಾಯಗಳನ್ನು ಟೀಕಿಸುವುದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ಈ ರೀತಿಯಾಗಿ ಮಾತನಾಡಿ ಅವರ ಮರ್ಯಾದೆಯನ್ನೂ ಹಾಳು ಮಾಡಿದ್ದೀರಿ ಎಂದರು.
ಧಾರ್ಮಿಕ ಮುಖಂಡರಾದ ಡಾ. ಭಾನುಪ್ರಕಾಶ್ ಶರ್ಮ, ಬಿಜೆಪಿ ನಗರಾಧ್ಯಕ್ಷರಾದ ಟಿ.ಎಸ್.ಶ್ರೀವತ್ಸ, ವಿಪ್ರ ಮುಖಂಡರಾದ ಎಚ್.ವಿ.ರಾಜೀವ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ಆದರ್ಶ ಸಂಘದ ಅಧ್ಯಕ್ಷ ಜಿ.ಆರ್.ನಾಗರಾಜ್, ವಿಪ್ರ ಪ್ರೊಫೆಷನಲ್ ಫೋರಂ ಅಧ್ಯಕ್ಷ ಎಸ್.ಭಾಷ್ಯಂ, ಸುಧೀಂದ್ರ, ಕೆ.ಆರ್.ಸತ್ಯನಾರಾಯಣ್, ರಾಕೇಶ್ ಭಟ್, ಎಚ್.ಜಿ.ಗಿರಿಧರ್ ಜಯಸಿಂಹ, ಶ್ರೀನಿವಾಸ್ ಪ್ರಸಾದ್, ಕಾಂಗ್ರೆಸ್ ಮುಖಂಡರಾದ ಲತಾ ಮೋಹನ್, ಜೆಡಿಎಸ್ ಯುವ ಮುಖಂಡರಾದ ವಿಜಯಕುಮಾರ್, ನಾಗೇಂದ್ರ ಬಾಬು, ಯೋಗ ನರಸಿಂಹ ಮುರಳಿ, ಹೊಯ್ಸಳ ಕರ್ನಾಟಕದ ರಂಗನಾಥ್, ವಕೀಲರಾದ ಶೇಷಗಿರಿ, ವಿಪ್ರ ಮಹಿಳಾ ಸಂಘದ ಅಧ್ಯಕ್ಷರಾದ ಡಾಕ್ಟರ್ ಲಕ್ಷ್ಮೀದೇವಿ, ಮಾಜಿ ನಗರಪಾಲಿಕೆ ಸದಸ್ಯರಾದ ಸೌಭಾಗ್ಯ ಮೂರ್ತಿ, ಕಡಕೋಳ ಜಗದೀಶ್, ವಿವೇಕಾನಂದ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಜಯರಾಮ್, ಓಂ ಶ್ರೀನಿವಾಸ ಇನ್ನಿತರ ವಿಪ್ರ ಮುಖಂಡರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

23 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

23 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

23 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

23 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

23 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago