ಜಿಲ್ಲೆಗಳು

ಪಾಲಿಬೆಟ್ಟ ಮೀನು ವ್ಯಾಪಾರಿಯ ಹತ್ಯೆ ಪ್ರಕರಣ : ಆರೋಪಿ ನೌಷದ್ ಬಂಧನ

ಸಿದ್ದಾಪುರ  : ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ ಕಾರಿನೊಂದಿಗೆ ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಾರಿಯಾಗಿದ್ದನು. ಸಿದ್ದಾಪುರದಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಪೊಲೀಸ್ ತಂಡವನ್ನು ನಿಯೋಜಿಸಲಾಗಿತ್ತು. ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಿವಶಂಕರ್ ನೇತೃತ್ವದೊಂದಿಗೆ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ತಲೆಮರಸಿಕೊಂಡಿದ್ದ ಆರೋಪಿಯನ್ನ ಮೈಸೂರಿನಲ್ಲಿ ಪತ್ತೆ ಹಚ್ಚಿ ಬಂದಿಸಿ ನ್ಯಾಯಕ್ಕೆ ಹಾಜರುಪಡಿಸಿದ್ದಾರೆ.

ಘಟನೆಯ ವಿವರ
ಪಾಲಿಟ್ಟದಲ್ಲಿ ಮೀನು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಚರ್ದು ಎಂಬವರ ಮಗ ಮಹಮ್ಮದ್ ತಾಸಿರ್ ವ್ಯಾಪಾರ ಮುಗಿಸಿಕೊಂಡು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಲ್ಟೊ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಏಕಾಏಕಿ ಡಿಕ್ಕಿ ಪಡಿಸಿದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ ಚಿಂತಾ ಜನಕ ಸ್ಥಿತಿಯಲ್ಲಿದ್ದ ತಾಹಿರ್ ನ್ನ ಪಾಲಿಬೆಟ್ಟ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ತಾಸಿರ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಡಿಕ್ಕಿ ಪಡಿಸಿದ ಕಾರು ಸಮೇತ ವ್ಯಕ್ತಿ ಪರಾರಿಯಾಗಿರುವ ಬಗ್ಗೆ ಸಿದ್ದಾಪುರ ಠಾಣೆಗೆ ದೂರು ನೀಡಿದ್ದರು.

ಹಳೆ ವೈಷಮ್ಯ ಘಟನೆಗೆ ಕಾರಣ.
ಮೀನು ವ್ಯಾಪಾರಿ ತಾಹಿರ್ ಹಾಗೂ ಪಾಲಿಬೆಟ್ಟದ ನೌಶಾದ್ ನಡುವೆ ಹಳೇ ವೈಷಮ್ಮ ಇರುವ ಹಿನ್ನೆಲೆಯಲ್ಲಿ ಕಾರು ಚಲಾಯಿಸಿಕೊಂಡು ಬಂದು ವ್ಯಕ್ತಿ ತಾಹಿರ್ ಎಂಬವರ ಮೇಲೆ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಸಿದ್ದಾಪುರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ ಸಂದರ್ಭ ಮೂರ್ನಾಡು ಬಳಿ ಕಾರು ಪತ್ತೆಯಾಗಿತ್ತು. ಕಾರನ್ನ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ ಪೋಲಿಸರ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .
ಚಿತ್ರ ಎಂ ಡಿ ಕೆ 16ಎಸ್ ಡಿ ಆರ್ 4 ಮೀನು ವ್ಯಾಪಾರಿ ಹತ್ಯೆ ಪ್ರಕರಣದ ಆರೋಪಿ ನೌಶಾದ್ ಬಂದಿಸಿದ ಪೋಲಿಸರು

andolanait

Recent Posts

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

19 mins ago

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

4 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

5 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

5 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

5 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago