ಸಿದ್ದಾಪುರ : ಪಾಲಿಬೆಟ್ಟದ ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಆರೋಪದಲ್ಲಿ ಆರೋಪಿ ನೌಶಾದ್ ಎಂಬತನನ್ನು ಸಿದ್ದಾಪುರ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ. ಡಿಸೆಂಬರ್ 10 ರಂದು ಮೀನು ವ್ಯಾಪಾರಿಯ ಮೇಲೆ ಕಾರು ಹತ್ತಿಸಿ ಗಂಭೀರ ಗಾಯಗೊಳಿಸಿದ್ದ ನಂತರ ಆರೋಪಿ ಕಾರಿನೊಂದಿಗೆ ಮೂರ್ನಾಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಪರಾರಿಯಾಗಿದ್ದನು. ಸಿದ್ದಾಪುರದಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಅಯ್ಯಪ್ಪ ಪೊಲೀಸ್ ತಂಡವನ್ನು ನಿಯೋಜಿಸಲಾಗಿತ್ತು. ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶಿವಶಂಕರ್ ನೇತೃತ್ವದೊಂದಿಗೆ ಸಿದ್ದಾಪುರ ಠಾಣಾಧಿಕಾರಿ ಮೋಹನ್ ರಾಜ್ ಹಾಗೂ ಸಿಬ್ಬಂದಿಗಳು ತಲೆಮರಸಿಕೊಂಡಿದ್ದ ಆರೋಪಿಯನ್ನ ಮೈಸೂರಿನಲ್ಲಿ ಪತ್ತೆ ಹಚ್ಚಿ ಬಂದಿಸಿ ನ್ಯಾಯಕ್ಕೆ ಹಾಜರುಪಡಿಸಿದ್ದಾರೆ.
ಘಟನೆಯ ವಿವರ
ಪಾಲಿಟ್ಟದಲ್ಲಿ ಮೀನು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಚರ್ದು ಎಂಬವರ ಮಗ ಮಹಮ್ಮದ್ ತಾಸಿರ್ ವ್ಯಾಪಾರ ಮುಗಿಸಿಕೊಂಡು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಲ್ಟೊ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಏಕಾಏಕಿ ಡಿಕ್ಕಿ ಪಡಿಸಿದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ ಚಿಂತಾ ಜನಕ ಸ್ಥಿತಿಯಲ್ಲಿದ್ದ ತಾಹಿರ್ ನ್ನ ಪಾಲಿಬೆಟ್ಟ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ತಾಸಿರ್ ಆಸ್ಪತ್ರೆಯಲ್ಲಿ ಮೃತಪಟ್ಟರು. ಡಿಕ್ಕಿ ಪಡಿಸಿದ ಕಾರು ಸಮೇತ ವ್ಯಕ್ತಿ ಪರಾರಿಯಾಗಿರುವ ಬಗ್ಗೆ ಸಿದ್ದಾಪುರ ಠಾಣೆಗೆ ದೂರು ನೀಡಿದ್ದರು.
ಹಳೆ ವೈಷಮ್ಯ ಘಟನೆಗೆ ಕಾರಣ.
ಮೀನು ವ್ಯಾಪಾರಿ ತಾಹಿರ್ ಹಾಗೂ ಪಾಲಿಬೆಟ್ಟದ ನೌಶಾದ್ ನಡುವೆ ಹಳೇ ವೈಷಮ್ಮ ಇರುವ ಹಿನ್ನೆಲೆಯಲ್ಲಿ ಕಾರು ಚಲಾಯಿಸಿಕೊಂಡು ಬಂದು ವ್ಯಕ್ತಿ ತಾಹಿರ್ ಎಂಬವರ ಮೇಲೆ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಸಿದ್ದಾಪುರ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ ಸಂದರ್ಭ ಮೂರ್ನಾಡು ಬಳಿ ಕಾರು ಪತ್ತೆಯಾಗಿತ್ತು. ಕಾರನ್ನ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ ಪೋಲಿಸರ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .
ಚಿತ್ರ ಎಂ ಡಿ ಕೆ 16ಎಸ್ ಡಿ ಆರ್ 4 ಮೀನು ವ್ಯಾಪಾರಿ ಹತ್ಯೆ ಪ್ರಕರಣದ ಆರೋಪಿ ನೌಶಾದ್ ಬಂದಿಸಿದ ಪೋಲಿಸರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…