ಜಿಲ್ಲೆಗಳು

ಗೋಣಿಕೊಪ್ಪದಲ್ಲಿ ಪೈಂಟ್ಸ್ ಅಂಗಡಿಗೆ ಬೆಂಕಿ

ಗೋಣಿಕೊಪ್ಪ: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಭೇರು ಪೈಂಟ್ಸ್ ಅಂಗಡಿಯಲ್ಲಿ  ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಅಪಾರ ನಷ್ಟ ಸಂಭವಿಸಿದೆ.
ಇಡೀ ಕಟ್ಟಡ ಸಂಪೂರ್ಣವಾಗಿ ಬೆಂಕಿಯಿಂದ ಆವರಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿತ್ತು. ನಂತರ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯಿತಾದರೂ ಬೆಂಕಿಯ ತೀವ್ರತೆಗೆ ಎರಡೂ ನೀರಿನ ಟ್ಯಾಂಕರ್ ಖಾಲಿಯಾಗಿ ಅಗ್ನಿ ಶಾಮಕ ದಳಕ್ಕೆ ನೀರು ತುಂಬಿಸಲೂ ವ್ಯವಸ್ಥೆಯೂ ಇಲ್ಲದೆ, ಗ್ರಾಮ ಪಂಚಾಯಿತಿಯ ಟ್ಯಾಂಕರ್‌ನಿಂದ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಯಿತು. ಈ ಘಟನೆಯಲ್ಲಿ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸೇರಿದಂತೆ ಎಲ್ಲರೂ ಸೇರಿ ಹರಸಾಹಸ ಪಟ್ಟು ಕೊನೆಗೂ ಬೆಂಕಿಯನ್ನು ನಂದಿಸುವಲ್ಲಿ  ಯಶಸ್ವಿಯಾದರು. ಅಗ್ನಿ ಆಕಸ್ಮಿಕಕ್ಕೆ ಕಾರಣ ಏನೆಂದು ತಿಳಿಯಲು ತನಿಖೆ ನಡೆಯುತ್ತಿದೆ.

lokesh

Recent Posts

ರನ್ಯಾ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಉಹಾಪೋಹ: ಜಮೀರ್‌ ಅಹ್ಮದ್‌

ಬೆಂಗಳೂರು: ನಟಿ ರನ್ಯಾ ರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಿಜೆಪಿಯವರ ಉಹಾಪೋಹ ಎಂದು ಸಚಿವ…

26 mins ago

ರನ್ಯಾ ಕೇಸ್‌ನಲ್ಲಿ ಸರ್ಕಾರವೇ ಭಾಗಿಯಾಗಿದೆ: ಆರ್‌.ಅಶೋಕ್‌

ಬೆಂಗಳೂರು: ನಟಿ ರನ್ಯಾರವ್‌ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸರ್ಕಾರದ ಪಾತ್ರ ಕೂಡ ಇರಬಹುದು. ಪ್ರೋಟೋಕಾಲ್‌ ದುರ್ಬಳಕೆ ಬಗ್ಗೆ ತನಿಖೆಯಾಗಬೇಕು…

57 mins ago

ಕಟ್ಟಡ ಕಾರ್ಮಿಕರಿಗಾಗಿ ʼಸಂಚಾರಿ ಆರೋಗ್ಯ ಘಟಕʼ ಆಂಬುಲೆನ್ಸ್:‌ ಸಿಎಂ

ಬೆಂಗಳೂರು: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಸಂಚಾರಿ ಆಸ್ಪತ್ರೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ…

2 hours ago

ತೀವ್ರ ಕೆಮ್ಮಿನಿಂದ ಬಳಲುತ್ತಿರುವ ಎಚ್.ಡಿ.ಕುಮಾರಸ್ವಾಮಿ: ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ

ಬೆಂಗಳೂರು: ತೀವ್ರ ಕಫಾ ಹಾಗೂ ಕೆಮ್ಮಿನಿಂದ ಬಳಲುತ್ತಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ…

2 hours ago

ಕುಶಾಲನಗರ| ಭೀಕರ ರಸ್ತೆ ಅಪಘಾತ: ಬೈಕ್‌ ಸವಾರ ಸಾವು

ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ…

2 hours ago

ಮೈಸೂರು| ನಾಲೆಗಳಿಗೆ ನೀರು ಬಿಡುವಂತೆ ಆಗ್ರಹ: ಅನ್ನದಾತರಿಂದ ಕಾಡಾ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು…

2 hours ago