ಜಿಲ್ಲೆಗಳು

ಪಂಪ್‌ಸೆಟ್‌ಗಳಿಗೆ ಮೀಟರ್ ಬೇಡ : ರೈತರ ಪ್ರತಿಭಟನೆ

ಚಾಮರಾಜನಗರ: ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ನೂತನ ವಿಧೇಯಕವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಪಣ್ಯದಹುಂಡಿ ಬಳಿ ರೈತರು ಸೋಮವಾರ ರಸ್ತೆತಡೆ ಚಳವಳಿ ನಡೆಸಿದರು.

ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ  ರೈತರ ಪಾಲಿಗೆ ನೂತನ ವಿದ್ಯುತ್ ವಿಧೇಯಕ ಮರಣಶಾಸನವಾಗಿದೆ ಎಂದು  ಆಕ್ರೋಶ ವ್ಯಕ್ತಪಡಿಸಿದ ರೈತರು, ವಿದ್ಯುತ್ ಖಾಸಗೀಕರಣವನ್ನು ಖಂಡಿಸಿದರು.
ಭಾಗ್ಯಜ್ಯೋತಿ, ಕುಠೀರಜ್ಯೋತಿ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ದೊರಕದಂತೆ ಮಾಡುವ ಷಡ್ಯಂತ್ರವನ್ನು ಈ ವಿಧೇಯಕದ ಮೂಲಕ ಮಾಡಲಾಗುತ್ತಿದೆ. ಇತ್ತೀಚಿನ  ವರ್ಷಗಳಲ್ಲಿ ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗಧಿಯಾಗಿಲ್ಲ.
ಇದರಿಂದ ಕಬ್ಬು ಬೆಳೆಗಾರರು ತೀವ್ರಸಂಕಷ್ಟದಲ್ಲಿದ್ದು ಪ್ರತಿ  ಟನ್‌ಗೆ ಕನಿಷ್ಠ ೫ಸಾವಿರ ರೂ. ನಿಗಧಿ ಮಾಡಬೇಕೆಂದು
ಆಗ್ರಹಿಸಿದರು.

ಜಿಲ್ಲೆಯಲ್ಲಿ ಸತತಮಳೆ ಹಾಗೂ ಪ್ರವಾಹದಿಂದ ಇತ್ತೀಚೆಗೆ ನೂರಾರು ಕೋಟಿ ರೂ. ಬೆಲೆಬಾಳುವ ಬೆಳೆ ನಷ್ಟ ಸಂಭವಿಸಿದ್ದು ಆಗಿರುವ ನಷ್ಟವನ್ನು ಸರ್ಕಾರ ಯಥಾವತ್ತಾಗಿ ತುಂಬಿಕೊಡಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಆಗ್ರಹಿಸಿದರು. ತಹಶೀಲ್ದಾರ್ ಬಸವರಾಜು ಅವರು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ರೈತರು ಪ್ರತಿಭಟನೆ ಕೈಬಿಟ್ಟರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಗ್ಗೊಠಾರವಿಜಯಕುಮಾರ್, ಮೇಲಾಜಿಪುರ ಕುಮಾರ್, ಹೊನ್ನೂರು ಬಸವಣ್ಣ, ಕುಂದಕೆರೆ ಸಂಪತ್ತು,  ಶಿವಮೂರ್ತಿ, ಅಶೋಕ್, ಮಹೇಂದ್ರ, ಮಹೇಶ್,  ಕಡಬೂರುಮಂಜುನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago