ಜಿಲ್ಲೆಗಳು

ಪಂಪ್‌ಸೆಟ್‌ಗಳಿಗೆ ಮೀಟರ್ ಬೇಡ : ರೈತರ ಪ್ರತಿಭಟನೆ

ಚಾಮರಾಜನಗರ: ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ನೂತನ ವಿಧೇಯಕವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಪಣ್ಯದಹುಂಡಿ ಬಳಿ ರೈತರು ಸೋಮವಾರ ರಸ್ತೆತಡೆ ಚಳವಳಿ ನಡೆಸಿದರು.

ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ  ರೈತರ ಪಾಲಿಗೆ ನೂತನ ವಿದ್ಯುತ್ ವಿಧೇಯಕ ಮರಣಶಾಸನವಾಗಿದೆ ಎಂದು  ಆಕ್ರೋಶ ವ್ಯಕ್ತಪಡಿಸಿದ ರೈತರು, ವಿದ್ಯುತ್ ಖಾಸಗೀಕರಣವನ್ನು ಖಂಡಿಸಿದರು.
ಭಾಗ್ಯಜ್ಯೋತಿ, ಕುಠೀರಜ್ಯೋತಿ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ದೊರಕದಂತೆ ಮಾಡುವ ಷಡ್ಯಂತ್ರವನ್ನು ಈ ವಿಧೇಯಕದ ಮೂಲಕ ಮಾಡಲಾಗುತ್ತಿದೆ. ಇತ್ತೀಚಿನ  ವರ್ಷಗಳಲ್ಲಿ ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗಧಿಯಾಗಿಲ್ಲ.
ಇದರಿಂದ ಕಬ್ಬು ಬೆಳೆಗಾರರು ತೀವ್ರಸಂಕಷ್ಟದಲ್ಲಿದ್ದು ಪ್ರತಿ  ಟನ್‌ಗೆ ಕನಿಷ್ಠ ೫ಸಾವಿರ ರೂ. ನಿಗಧಿ ಮಾಡಬೇಕೆಂದು
ಆಗ್ರಹಿಸಿದರು.

ಜಿಲ್ಲೆಯಲ್ಲಿ ಸತತಮಳೆ ಹಾಗೂ ಪ್ರವಾಹದಿಂದ ಇತ್ತೀಚೆಗೆ ನೂರಾರು ಕೋಟಿ ರೂ. ಬೆಲೆಬಾಳುವ ಬೆಳೆ ನಷ್ಟ ಸಂಭವಿಸಿದ್ದು ಆಗಿರುವ ನಷ್ಟವನ್ನು ಸರ್ಕಾರ ಯಥಾವತ್ತಾಗಿ ತುಂಬಿಕೊಡಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಆಗ್ರಹಿಸಿದರು. ತಹಶೀಲ್ದಾರ್ ಬಸವರಾಜು ಅವರು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ರೈತರು ಪ್ರತಿಭಟನೆ ಕೈಬಿಟ್ಟರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಗ್ಗೊಠಾರವಿಜಯಕುಮಾರ್, ಮೇಲಾಜಿಪುರ ಕುಮಾರ್, ಹೊನ್ನೂರು ಬಸವಣ್ಣ, ಕುಂದಕೆರೆ ಸಂಪತ್ತು,  ಶಿವಮೂರ್ತಿ, ಅಶೋಕ್, ಮಹೇಂದ್ರ, ಮಹೇಶ್,  ಕಡಬೂರುಮಂಜುನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

4 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

6 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

7 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

7 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

7 hours ago