ಚಾಮರಾಜನಗರ: ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವ ನೂತನ ವಿಧೇಯಕವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಪಣ್ಯದಹುಂಡಿ ಬಳಿ ರೈತರು ಸೋಮವಾರ ರಸ್ತೆತಡೆ ಚಳವಳಿ ನಡೆಸಿದರು.
ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ ರೈತರ ಪಾಲಿಗೆ ನೂತನ ವಿದ್ಯುತ್ ವಿಧೇಯಕ ಮರಣಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ವಿದ್ಯುತ್ ಖಾಸಗೀಕರಣವನ್ನು ಖಂಡಿಸಿದರು.
ಭಾಗ್ಯಜ್ಯೋತಿ, ಕುಠೀರಜ್ಯೋತಿ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ದೊರಕದಂತೆ ಮಾಡುವ ಷಡ್ಯಂತ್ರವನ್ನು ಈ ವಿಧೇಯಕದ ಮೂಲಕ ಮಾಡಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗಧಿಯಾಗಿಲ್ಲ.
ಇದರಿಂದ ಕಬ್ಬು ಬೆಳೆಗಾರರು ತೀವ್ರಸಂಕಷ್ಟದಲ್ಲಿದ್ದು ಪ್ರತಿ ಟನ್ಗೆ ಕನಿಷ್ಠ ೫ಸಾವಿರ ರೂ. ನಿಗಧಿ ಮಾಡಬೇಕೆಂದು
ಆಗ್ರಹಿಸಿದರು.
ಜಿಲ್ಲೆಯಲ್ಲಿ ಸತತಮಳೆ ಹಾಗೂ ಪ್ರವಾಹದಿಂದ ಇತ್ತೀಚೆಗೆ ನೂರಾರು ಕೋಟಿ ರೂ. ಬೆಲೆಬಾಳುವ ಬೆಳೆ ನಷ್ಟ ಸಂಭವಿಸಿದ್ದು ಆಗಿರುವ ನಷ್ಟವನ್ನು ಸರ್ಕಾರ ಯಥಾವತ್ತಾಗಿ ತುಂಬಿಕೊಡಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಆಗ್ರಹಿಸಿದರು. ತಹಶೀಲ್ದಾರ್ ಬಸವರಾಜು ಅವರು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ರೈತರು ಪ್ರತಿಭಟನೆ ಕೈಬಿಟ್ಟರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಗ್ಗೊಠಾರವಿಜಯಕುಮಾರ್, ಮೇಲಾಜಿಪುರ ಕುಮಾರ್, ಹೊನ್ನೂರು ಬಸವಣ್ಣ, ಕುಂದಕೆರೆ ಸಂಪತ್ತು, ಶಿವಮೂರ್ತಿ, ಅಶೋಕ್, ಮಹೇಂದ್ರ, ಮಹೇಶ್, ಕಡಬೂರುಮಂಜುನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…
ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…
ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…