ಚಾಮರಾಜನಗರ: ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವ ನೂತನ ವಿಧೇಯಕವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಪಣ್ಯದಹುಂಡಿ ಬಳಿ ರೈತರು ಸೋಮವಾರ ರಸ್ತೆತಡೆ ಚಳವಳಿ ನಡೆಸಿದರು.
ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ ರೈತರ ಪಾಲಿಗೆ ನೂತನ ವಿದ್ಯುತ್ ವಿಧೇಯಕ ಮರಣಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ವಿದ್ಯುತ್ ಖಾಸಗೀಕರಣವನ್ನು ಖಂಡಿಸಿದರು.
ಭಾಗ್ಯಜ್ಯೋತಿ, ಕುಠೀರಜ್ಯೋತಿ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ದೊರಕದಂತೆ ಮಾಡುವ ಷಡ್ಯಂತ್ರವನ್ನು ಈ ವಿಧೇಯಕದ ಮೂಲಕ ಮಾಡಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗಧಿಯಾಗಿಲ್ಲ.
ಇದರಿಂದ ಕಬ್ಬು ಬೆಳೆಗಾರರು ತೀವ್ರಸಂಕಷ್ಟದಲ್ಲಿದ್ದು ಪ್ರತಿ ಟನ್ಗೆ ಕನಿಷ್ಠ ೫ಸಾವಿರ ರೂ. ನಿಗಧಿ ಮಾಡಬೇಕೆಂದು
ಆಗ್ರಹಿಸಿದರು.
ಜಿಲ್ಲೆಯಲ್ಲಿ ಸತತಮಳೆ ಹಾಗೂ ಪ್ರವಾಹದಿಂದ ಇತ್ತೀಚೆಗೆ ನೂರಾರು ಕೋಟಿ ರೂ. ಬೆಲೆಬಾಳುವ ಬೆಳೆ ನಷ್ಟ ಸಂಭವಿಸಿದ್ದು ಆಗಿರುವ ನಷ್ಟವನ್ನು ಸರ್ಕಾರ ಯಥಾವತ್ತಾಗಿ ತುಂಬಿಕೊಡಬೇಕೆಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಆಗ್ರಹಿಸಿದರು. ತಹಶೀಲ್ದಾರ್ ಬಸವರಾಜು ಅವರು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ರೈತರು ಪ್ರತಿಭಟನೆ ಕೈಬಿಟ್ಟರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಗ್ಗೊಠಾರವಿಜಯಕುಮಾರ್, ಮೇಲಾಜಿಪುರ ಕುಮಾರ್, ಹೊನ್ನೂರು ಬಸವಣ್ಣ, ಕುಂದಕೆರೆ ಸಂಪತ್ತು, ಶಿವಮೂರ್ತಿ, ಅಶೋಕ್, ಮಹೇಂದ್ರ, ಮಹೇಶ್, ಕಡಬೂರುಮಂಜುನಾಥ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…