ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್ಎಫ್ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಪೌರಾಡಳಿತ ಉತ್ತರ ನೀಡಿದ್ದು, ಈಗಾಗಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2.07 ಕೋಟಿ ರೂ ಅನುದಾನ ನೀಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3.42 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ. ಕಳೆದ 3 ವರ್ಷದ ಅವಧಿಯಲ್ಲಿ ಎಸ್ಎಫ್ಸಿ ಮುಕ್ತ ನಿಧಿ ಹಾಗೂ ಕುಡಿಯುವ ನೀರಿನ ಅನುದಾನದಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ನಗರೋತ್ಥಾನ 3ನೇ ಹಂತದ ಯಜನೆಯಡಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಅಲ್ಲದೇ 1.37 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ತ್ಯಾಜ್ಯವನ್ನು ಸಂಗ್ರಹಿಸಲು, ಸಾಗಾಣೆ ಮಾಡಲು ಅಗತ್ಯವಿರುವ ಆಟೋ ಟಿಪ್ಪರ್ಗಳು, ಟಾಟಾ ಹಿಟಾಚಿ ಹಾಗೂ ಟ್ರ್ಯಾಕ್ಟರ್ ಟೈಲರ್ಗಳನ್ನು ಖರೀದಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಮಳೆ ಹಾನಿ ಪರಿಹಾರ ಸಂಬಂಧ ಶಾಸಕ ಆರ್.ನರೇಂದ್ರ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ ಮಳೆಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿರುತತದೆ. ಜಿಲ್ಲಾಧಿಕಾರಿ ಅವರ ಪ್ರಕೃತಿ ವಿಕೋಪದಡಿ ಖಾತೆಯಲ್ಲಿ 23,74,24,510 ರೂ ಅನುದಾನ ಲಭ್ಯವಿದ್ದು, ಚಾಮರಾಜನಗರ ತಾಲೂಕಿಗೆ 2 ಕೋಟಿ ರೂ, ಕೊಳ್ಳೇಗಾಲಕ್ಕೆ 50 ಲಕ್ಷ ರೂ, ಗುಂಡ್ಲುಪೇಟೆ ತಾಲೂಕಿಗೆ 80 ಲಕ್ಷ ರೂ, ಹನೂರಿಗೆ 50 ಲಕ್ಷ ರೂ ಹಾಗೂ ಯಳಂದೂರು ತಾಲೂಕಿಗೆ 2.5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದ್ದಾರೆ
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…