ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್ಎಫ್ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಪೌರಾಡಳಿತ ಉತ್ತರ ನೀಡಿದ್ದು, ಈಗಾಗಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2.07 ಕೋಟಿ ರೂ ಅನುದಾನ ನೀಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3.42 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ. ಕಳೆದ 3 ವರ್ಷದ ಅವಧಿಯಲ್ಲಿ ಎಸ್ಎಫ್ಸಿ ಮುಕ್ತ ನಿಧಿ ಹಾಗೂ ಕುಡಿಯುವ ನೀರಿನ ಅನುದಾನದಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ನಗರೋತ್ಥಾನ 3ನೇ ಹಂತದ ಯಜನೆಯಡಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಅಲ್ಲದೇ 1.37 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ತ್ಯಾಜ್ಯವನ್ನು ಸಂಗ್ರಹಿಸಲು, ಸಾಗಾಣೆ ಮಾಡಲು ಅಗತ್ಯವಿರುವ ಆಟೋ ಟಿಪ್ಪರ್ಗಳು, ಟಾಟಾ ಹಿಟಾಚಿ ಹಾಗೂ ಟ್ರ್ಯಾಕ್ಟರ್ ಟೈಲರ್ಗಳನ್ನು ಖರೀದಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಮಳೆ ಹಾನಿ ಪರಿಹಾರ ಸಂಬಂಧ ಶಾಸಕ ಆರ್.ನರೇಂದ್ರ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ ಮಳೆಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿರುತತದೆ. ಜಿಲ್ಲಾಧಿಕಾರಿ ಅವರ ಪ್ರಕೃತಿ ವಿಕೋಪದಡಿ ಖಾತೆಯಲ್ಲಿ 23,74,24,510 ರೂ ಅನುದಾನ ಲಭ್ಯವಿದ್ದು, ಚಾಮರಾಜನಗರ ತಾಲೂಕಿಗೆ 2 ಕೋಟಿ ರೂ, ಕೊಳ್ಳೇಗಾಲಕ್ಕೆ 50 ಲಕ್ಷ ರೂ, ಗುಂಡ್ಲುಪೇಟೆ ತಾಲೂಕಿಗೆ 80 ಲಕ್ಷ ರೂ, ಹನೂರಿಗೆ 50 ಲಕ್ಷ ರೂ ಹಾಗೂ ಯಳಂದೂರು ತಾಲೂಕಿಗೆ 2.5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದ್ದಾರೆ
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…