ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್ಎಫ್ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಪೌರಾಡಳಿತ ಉತ್ತರ ನೀಡಿದ್ದು, ಈಗಾಗಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2.07 ಕೋಟಿ ರೂ ಅನುದಾನ ನೀಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3.42 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ. ಕಳೆದ 3 ವರ್ಷದ ಅವಧಿಯಲ್ಲಿ ಎಸ್ಎಫ್ಸಿ ಮುಕ್ತ ನಿಧಿ ಹಾಗೂ ಕುಡಿಯುವ ನೀರಿನ ಅನುದಾನದಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ನಗರೋತ್ಥಾನ 3ನೇ ಹಂತದ ಯಜನೆಯಡಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಅಲ್ಲದೇ 1.37 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ತ್ಯಾಜ್ಯವನ್ನು ಸಂಗ್ರಹಿಸಲು, ಸಾಗಾಣೆ ಮಾಡಲು ಅಗತ್ಯವಿರುವ ಆಟೋ ಟಿಪ್ಪರ್ಗಳು, ಟಾಟಾ ಹಿಟಾಚಿ ಹಾಗೂ ಟ್ರ್ಯಾಕ್ಟರ್ ಟೈಲರ್ಗಳನ್ನು ಖರೀದಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಮಳೆ ಹಾನಿ ಪರಿಹಾರ ಸಂಬಂಧ ಶಾಸಕ ಆರ್.ನರೇಂದ್ರ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ ಮಳೆಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿರುತತದೆ. ಜಿಲ್ಲಾಧಿಕಾರಿ ಅವರ ಪ್ರಕೃತಿ ವಿಕೋಪದಡಿ ಖಾತೆಯಲ್ಲಿ 23,74,24,510 ರೂ ಅನುದಾನ ಲಭ್ಯವಿದ್ದು, ಚಾಮರಾಜನಗರ ತಾಲೂಕಿಗೆ 2 ಕೋಟಿ ರೂ, ಕೊಳ್ಳೇಗಾಲಕ್ಕೆ 50 ಲಕ್ಷ ರೂ, ಗುಂಡ್ಲುಪೇಟೆ ತಾಲೂಕಿಗೆ 80 ಲಕ್ಷ ರೂ, ಹನೂರಿಗೆ 50 ಲಕ್ಷ ರೂ ಹಾಗೂ ಯಳಂದೂರು ತಾಲೂಕಿಗೆ 2.5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದ್ದಾರೆ
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…