ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್ಎಫ್ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ.
ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ ಪ್ರಶ್ನೆಗೆ ಪೌರಾಡಳಿತ ಉತ್ತರ ನೀಡಿದ್ದು, ಈಗಾಗಲೇ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯಡಿ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. 14 ಮತ್ತು 15ನೇ ಹಣಕಾಸು ಆಯೋಗದ ಅನುದಾನದಲ್ಲಿ 2.07 ಕೋಟಿ ರೂ ಅನುದಾನ ನೀಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ 3.42 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ. ಕಳೆದ 3 ವರ್ಷದ ಅವಧಿಯಲ್ಲಿ ಎಸ್ಎಫ್ಸಿ ಮುಕ್ತ ನಿಧಿ ಹಾಗೂ ಕುಡಿಯುವ ನೀರಿನ ಅನುದಾನದಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ ನಗರೋತ್ಥಾನ 3ನೇ ಹಂತದ ಯಜನೆಯಡಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಅಲ್ಲದೇ 1.37 ಕೋಟಿ ರೂ ಬಿಡುಗಡೆ ಮಾಡಲಾಗಿದೆ. ತ್ಯಾಜ್ಯವನ್ನು ಸಂಗ್ರಹಿಸಲು, ಸಾಗಾಣೆ ಮಾಡಲು ಅಗತ್ಯವಿರುವ ಆಟೋ ಟಿಪ್ಪರ್ಗಳು, ಟಾಟಾ ಹಿಟಾಚಿ ಹಾಗೂ ಟ್ರ್ಯಾಕ್ಟರ್ ಟೈಲರ್ಗಳನ್ನು ಖರೀದಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಮಳೆ ಹಾನಿ ಪರಿಹಾರ ಸಂಬಂಧ ಶಾಸಕ ಆರ್.ನರೇಂದ್ರ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಆರ್.ಅಶೋಕ್ ಉತ್ತರಿಸಿದ್ದು, ಚಾ.ನಗರ ಜಿಲ್ಲೆಯಲ್ಲಿ ಮಳೆಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿರುತತದೆ. ಜಿಲ್ಲಾಧಿಕಾರಿ ಅವರ ಪ್ರಕೃತಿ ವಿಕೋಪದಡಿ ಖಾತೆಯಲ್ಲಿ 23,74,24,510 ರೂ ಅನುದಾನ ಲಭ್ಯವಿದ್ದು, ಚಾಮರಾಜನಗರ ತಾಲೂಕಿಗೆ 2 ಕೋಟಿ ರೂ, ಕೊಳ್ಳೇಗಾಲಕ್ಕೆ 50 ಲಕ್ಷ ರೂ, ಗುಂಡ್ಲುಪೇಟೆ ತಾಲೂಕಿಗೆ 80 ಲಕ್ಷ ರೂ, ಹನೂರಿಗೆ 50 ಲಕ್ಷ ರೂ ಹಾಗೂ ಯಳಂದೂರು ತಾಲೂಕಿಗೆ 2.5 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಉತ್ತರ ನೀಡಿದ್ದಾರೆ
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…