ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ
ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಡುವ ಮೂಲಕ ಚಾಲನೆ ನೀಡಿದರು.
ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಟವಾಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಗಳು ಗ್ರಾಮೀಣ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮನುಷ್ಯರು ಆರೋಗ್ಯವಂತರಾಗಿರುತ್ತಿದ್ದರು. ಏಕೆಂದರೆ ಕೃಷಿ ಮಾಡುತ್ತಿದ್ದರು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದ ಜನರೆ ಹಲವು ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಬೇಸರಿಸಿದರು.
ಈ ವೇಳೆ ತಾಪಂ ಇಒ ಲೋಕೇಶ್ ಮೂರ್ತಿ, ಸಹಾಯಕ ನಿರ್ದೇಶಕ ಸುರೇಂದ್ರ, ಗ್ರಾಪಂ ಅಧ್ಯಕ್ಷರಾದ ನಿಂಗಮ್ಮ, ಉಪಾಧ್ಯಕ್ಷ ಕೆಂಪೇಗೌಡ, ಮಾಜಿ ಉಪಾಧ್ಯಕ್ಷ ಲೋಕೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಶ್ವಥ್ಕುಮಾರ್ ಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬೆಟ್ಟಸ್ವಾಮಿಗೌಡ, ವಿಎಸ್ಎಸ್ಎನ್ಬಿ ಅಧ್ಯಕ್ಷ ಜೆ.ಶಿವಶಂಕರ್, ಬಿಜೆಪಿ ಮುಖಂಡ ಎಸ್.ಎನ್.ಟಿ. ಸೋಮಶೇಖರ್, ಪುರುಷೋತ್ತಮ್, ನಾಗಣ್ಣ, ಗ್ರಾಪಂ ಸದಸ್ಯರಾದ ದಿವಾಕರ, ದಾಸೇಗೌಡ, ಶ್ವೇತಾ ದೇವರಾಜು, ಶಂಕರ್, ಪ್ರಭಾವತಿ, ಸತೀಶ್, ಸವಿತಾ, ಸ್ವಾಮಿಗೌಡ, ಗೀತಾ, ಶ್ರೀದೇವಿ, ಚನ್ನಗಿರಿ, ನಾಗರತ್ನ, ಸೌಮ್ಯ, ಎಸ್.ಡಿ.ನಾಗರತ್ನ, ಕೆ.ಶಂಕರ್, ಮಹೇಶ್, ಪಿಡಿಓ ಸುರೇಶ್, ಕಾರ್ಯದರ್ಶಿ ರಕ್ಷಿತ್ ಹಾಜರಿದ್ದರು.
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…