ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ
ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಡುವ ಮೂಲಕ ಚಾಲನೆ ನೀಡಿದರು.
ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಟವಾಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಗಳು ಗ್ರಾಮೀಣ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮನುಷ್ಯರು ಆರೋಗ್ಯವಂತರಾಗಿರುತ್ತಿದ್ದರು. ಏಕೆಂದರೆ ಕೃಷಿ ಮಾಡುತ್ತಿದ್ದರು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದ ಜನರೆ ಹಲವು ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಬೇಸರಿಸಿದರು.
ಈ ವೇಳೆ ತಾಪಂ ಇಒ ಲೋಕೇಶ್ ಮೂರ್ತಿ, ಸಹಾಯಕ ನಿರ್ದೇಶಕ ಸುರೇಂದ್ರ, ಗ್ರಾಪಂ ಅಧ್ಯಕ್ಷರಾದ ನಿಂಗಮ್ಮ, ಉಪಾಧ್ಯಕ್ಷ ಕೆಂಪೇಗೌಡ, ಮಾಜಿ ಉಪಾಧ್ಯಕ್ಷ ಲೋಕೇಶ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಶ್ವಥ್ಕುಮಾರ್ ಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬೆಟ್ಟಸ್ವಾಮಿಗೌಡ, ವಿಎಸ್ಎಸ್ಎನ್ಬಿ ಅಧ್ಯಕ್ಷ ಜೆ.ಶಿವಶಂಕರ್, ಬಿಜೆಪಿ ಮುಖಂಡ ಎಸ್.ಎನ್.ಟಿ. ಸೋಮಶೇಖರ್, ಪುರುಷೋತ್ತಮ್, ನಾಗಣ್ಣ, ಗ್ರಾಪಂ ಸದಸ್ಯರಾದ ದಿವಾಕರ, ದಾಸೇಗೌಡ, ಶ್ವೇತಾ ದೇವರಾಜು, ಶಂಕರ್, ಪ್ರಭಾವತಿ, ಸತೀಶ್, ಸವಿತಾ, ಸ್ವಾಮಿಗೌಡ, ಗೀತಾ, ಶ್ರೀದೇವಿ, ಚನ್ನಗಿರಿ, ನಾಗರತ್ನ, ಸೌಮ್ಯ, ಎಸ್.ಡಿ.ನಾಗರತ್ನ, ಕೆ.ಶಂಕರ್, ಮಹೇಶ್, ಪಿಡಿಓ ಸುರೇಶ್, ಕಾರ್ಯದರ್ಶಿ ರಕ್ಷಿತ್ ಹಾಜರಿದ್ದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…