ಜಿಲ್ಲೆಗಳು

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು

ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಡುವ ಮೂಲಕ ಚಾಲನೆ ನೀಡಿದರು.

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಕ್ಕಳೊಂದಿಗೆ ಕಬಡ್ಡಿ ಆಟವಾಡುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಗಳು ಗ್ರಾಮೀಣ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಮನುಷ್ಯರು ಆರೋಗ್ಯವಂತರಾಗಿರುತ್ತಿದ್ದರು. ಏಕೆಂದರೆ ಕೃಷಿ ಮಾಡುತ್ತಿದ್ದರು. ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದ ಜನರೆ ಹಲವು ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಬೇಸರಿಸಿದರು.

ಈ ವೇಳೆ ತಾಪಂ ಇಒ ಲೋಕೇಶ್ ಮೂರ್ತಿ, ಸಹಾಯಕ ನಿರ್ದೇಶಕ ಸುರೇಂದ್ರ, ಗ್ರಾಪಂ ಅಧ್ಯಕ್ಷರಾದ ನಿಂಗಮ್ಮ, ಉಪಾಧ್ಯಕ್ಷ ಕೆಂಪೇಗೌಡ, ಮಾಜಿ ಉಪಾಧ್ಯಕ್ಷ ಲೋಕೇಶ್, ಪಿಎಲ್‌ಡಿ ಬ್ಯಾಂಕ್  ಮಾಜಿ ಅಧ್ಯಕ್ಷ ಅಶ್ವಥ್‌ಕುಮಾರ್ ಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬೆಟ್ಟಸ್ವಾಮಿಗೌಡ, ವಿಎಸ್‌ಎಸ್‌ಎನ್‌ಬಿ ಅಧ್ಯಕ್ಷ ಜೆ.ಶಿವಶಂಕರ್, ಬಿಜೆಪಿ ಮುಖಂಡ ಎಸ್.ಎನ್.ಟಿ. ಸೋಮಶೇಖರ್, ಪುರುಷೋತ್ತಮ್, ನಾಗಣ್ಣ, ಗ್ರಾಪಂ ಸದಸ್ಯರಾದ ದಿವಾಕರ, ದಾಸೇಗೌಡ, ಶ್ವೇತಾ ದೇವರಾಜು, ಶಂಕರ್, ಪ್ರಭಾವತಿ, ಸತೀಶ್, ಸವಿತಾ, ಸ್ವಾಮಿಗೌಡ, ಗೀತಾ, ಶ್ರೀದೇವಿ, ಚನ್ನಗಿರಿ, ನಾಗರತ್ನ, ಸೌಮ್ಯ, ಎಸ್.ಡಿ.ನಾಗರತ್ನ, ಕೆ.ಶಂಕರ್, ಮಹೇಶ್, ಪಿಡಿಓ ಸುರೇಶ್, ಕಾರ್ಯದರ್ಶಿ ರಕ್ಷಿತ್ ಹಾಜರಿದ್ದರು.

andolanait

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

33 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

41 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

47 mins ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

1 hour ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago