ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ (೧೭) ಕಾಣೆಯಾದ ಬಾಲಕಿ. ಪಾಂಡವಪುರದಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿ ನಂದಿನಿ ನ.೨೪ರಂದು ಬೆಳಿಗ್ಗೆ ಕಾಲೇಜಿಗೆ ಹೋದವಳು ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಕಾಲೇಜಿನ ಬಳಿ ವಿಚಾರ ಮಾಡಿದ ಸಂದರ್ಭದಲ್ಲಿ ನಂದಿನಿಯನ್ನು ಸಿದ್ದ ಎಂಬ ಯುವಕ ಬೈಕ್ನಲ್ಲಿ ಕೂರಿಸಿಕೊಂಡು ಅಪಹರಣ ಮಾಡಿದ್ದಾನೆ ಎಂಬುದಾಗಿ ತಿಳಿಸಿದ್ದಾರೆ.
ಹಾಗಾಗಿ ನನ್ನ ಮಗಳನ್ನು ಹುಡುಕಿಕೊಡಬೇಕು ಎಂದು ಬಾಲಕಿ ತಂದೆ ಸತೀಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ಹೋಗುವಾಗ ರೆಡ್ಮಿ ಮೊಬೈಲ್, ಮೈಮೇಲೆ ನೀಲಿ ಕಲರ್ ಟಾಪ್, ಬ್ಲಾಕ್ ಪ್ಯಾಂಟ್ ಧರಿಸಿದ್ದಳು. ೫.೫ ಅಡಿ ಎತ್ತರ, ಗೋಧಿ ಬಣ್ಣ ಹೊಂದಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…
ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…