ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ (೧೭) ಕಾಣೆಯಾದ ಬಾಲಕಿ. ಪಾಂಡವಪುರದಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿ ನಂದಿನಿ ನ.೨೪ರಂದು ಬೆಳಿಗ್ಗೆ ಕಾಲೇಜಿಗೆ ಹೋದವಳು ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಕಾಲೇಜಿನ ಬಳಿ ವಿಚಾರ ಮಾಡಿದ ಸಂದರ್ಭದಲ್ಲಿ ನಂದಿನಿಯನ್ನು ಸಿದ್ದ ಎಂಬ ಯುವಕ ಬೈಕ್ನಲ್ಲಿ ಕೂರಿಸಿಕೊಂಡು ಅಪಹರಣ ಮಾಡಿದ್ದಾನೆ ಎಂಬುದಾಗಿ ತಿಳಿಸಿದ್ದಾರೆ.
ಹಾಗಾಗಿ ನನ್ನ ಮಗಳನ್ನು ಹುಡುಕಿಕೊಡಬೇಕು ಎಂದು ಬಾಲಕಿ ತಂದೆ ಸತೀಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ ಹೋಗುವಾಗ ರೆಡ್ಮಿ ಮೊಬೈಲ್, ಮೈಮೇಲೆ ನೀಲಿ ಕಲರ್ ಟಾಪ್, ಬ್ಲಾಕ್ ಪ್ಯಾಂಟ್ ಧರಿಸಿದ್ದಳು. ೫.೫ ಅಡಿ ಎತ್ತರ, ಗೋಧಿ ಬಣ್ಣ ಹೊಂದಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…