ಜಿಲ್ಲೆಗಳು

ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ

ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ.
ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ಧರ್ಮರಾಜು ಎಂಬುವರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರ ಮಾಡಲು ಗ್ರಾಮದ ಹೊರವಲಯದ ರುದ್ರಭೂಮಿಗೆ ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮಾಡುವ ಸಂದರ್ಭದಲ್ಲಿ ಧೂಪ, ಗಂಧದ ಕಡ್ಡಿ ಹೊಗೆಗೆ ಮರದಲ್ಲಿ ಕಟ್ಟಿದ್ದ ಹೆಜ್ಜೇನು ಎದ್ದು ಅಂತ್ಯಸAಸ್ಕಾರದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರ ಮೇಲೆ ದಾಳಿ ನಡೆಸಿವೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆಯೇ ಸಾರ್ವಜನಿಕರು ಶವವನ್ನು ಬಿಟ್ಟು ಓಡಿಹೋಗಿದ್ದಾರೆ. ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಸೇರಿದಂತೆ ೪೦ಕ್ಕೂ ಅಧಿಕ ಮಂದಿಗೆ ಗಾಯಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ಸಾರ್ವಜನಿಕರು ತಕ್ಷಣವೇ ಸ್ಥಳೀಯರು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ದಾಳಿಗೆ ಒಳಗಾದ ಎಲ್ಲ ಸಾರ್ವಜನಿಕರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಸಾರ್ವಜನಿಕರಿಗೆ ಸಣ್ಣಪಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲರಿಗೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ.
ಹೆಜ್ಜೇನು ದಾಳಿಯಲ್ಲಿ ಹಾರೋಹಳ್ಳಿ ಗ್ರಾಮದ ರಮೇಶ್, ಸತ್ಯನಾರಾಯಣ್, ವೀಣಾ, ವರುಣ್, ಆನಂದ್, ಪ್ರಜ್ವಲ್, ನೂತನ್ ಸೇರಿದಂತೆ ಹಲವು ಮಂದಿ ಗಾಯಗೊಂಡು ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ.

 

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago