ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ.
ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ಧರ್ಮರಾಜು ಎಂಬುವರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರ ಮಾಡಲು ಗ್ರಾಮದ ಹೊರವಲಯದ ರುದ್ರಭೂಮಿಗೆ ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮಾಡುವ ಸಂದರ್ಭದಲ್ಲಿ ಧೂಪ, ಗಂಧದ ಕಡ್ಡಿ ಹೊಗೆಗೆ ಮರದಲ್ಲಿ ಕಟ್ಟಿದ್ದ ಹೆಜ್ಜೇನು ಎದ್ದು ಅಂತ್ಯಸAಸ್ಕಾರದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರ ಮೇಲೆ ದಾಳಿ ನಡೆಸಿವೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆಯೇ ಸಾರ್ವಜನಿಕರು ಶವವನ್ನು ಬಿಟ್ಟು ಓಡಿಹೋಗಿದ್ದಾರೆ. ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಸೇರಿದಂತೆ ೪೦ಕ್ಕೂ ಅಧಿಕ ಮಂದಿಗೆ ಗಾಯಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ಸಾರ್ವಜನಿಕರು ತಕ್ಷಣವೇ ಸ್ಥಳೀಯರು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ದಾಳಿಗೆ ಒಳಗಾದ ಎಲ್ಲ ಸಾರ್ವಜನಿಕರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಸಾರ್ವಜನಿಕರಿಗೆ ಸಣ್ಣಪಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲರಿಗೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ.
ಹೆಜ್ಜೇನು ದಾಳಿಯಲ್ಲಿ ಹಾರೋಹಳ್ಳಿ ಗ್ರಾಮದ ರಮೇಶ್, ಸತ್ಯನಾರಾಯಣ್, ವೀಣಾ, ವರುಣ್, ಆನಂದ್, ಪ್ರಜ್ವಲ್, ನೂತನ್ ಸೇರಿದಂತೆ ಹಲವು ಮಂದಿ ಗಾಯಗೊಂಡು ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…