ಜಿಲ್ಲೆಗಳು

ಶವಸಂಸ್ಕಾರ ವೇಳೆ ಹೆಜ್ಜೇನು ದಾಳಿ : 40ಕ್ಕೂ ಹೆಚ್ಚು ಮಂದಿ ಗಾಯ

ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ.
ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ಧರ್ಮರಾಜು ಎಂಬುವರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರ ಮಾಡಲು ಗ್ರಾಮದ ಹೊರವಲಯದ ರುದ್ರಭೂಮಿಗೆ ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮಾಡುವ ಸಂದರ್ಭದಲ್ಲಿ ಧೂಪ, ಗಂಧದ ಕಡ್ಡಿ ಹೊಗೆಗೆ ಮರದಲ್ಲಿ ಕಟ್ಟಿದ್ದ ಹೆಜ್ಜೇನು ಎದ್ದು ಅಂತ್ಯಸAಸ್ಕಾರದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರ ಮೇಲೆ ದಾಳಿ ನಡೆಸಿವೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆಯೇ ಸಾರ್ವಜನಿಕರು ಶವವನ್ನು ಬಿಟ್ಟು ಓಡಿಹೋಗಿದ್ದಾರೆ. ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಸೇರಿದಂತೆ ೪೦ಕ್ಕೂ ಅಧಿಕ ಮಂದಿಗೆ ಗಾಯಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ಸಾರ್ವಜನಿಕರು ತಕ್ಷಣವೇ ಸ್ಥಳೀಯರು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ದಾಳಿಗೆ ಒಳಗಾದ ಎಲ್ಲ ಸಾರ್ವಜನಿಕರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಸಾರ್ವಜನಿಕರಿಗೆ ಸಣ್ಣಪಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲರಿಗೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ.
ಹೆಜ್ಜೇನು ದಾಳಿಯಲ್ಲಿ ಹಾರೋಹಳ್ಳಿ ಗ್ರಾಮದ ರಮೇಶ್, ಸತ್ಯನಾರಾಯಣ್, ವೀಣಾ, ವರುಣ್, ಆನಂದ್, ಪ್ರಜ್ವಲ್, ನೂತನ್ ಸೇರಿದಂತೆ ಹಲವು ಮಂದಿ ಗಾಯಗೊಂಡು ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

13 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

14 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

15 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

21 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

21 hours ago