ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ.
ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ಧರ್ಮರಾಜು ಎಂಬುವರು ಮೃತಪಟ್ಟಿದ್ದರು. ಅವರ ಅಂತ್ಯ ಸಂಸ್ಕಾರ ಮಾಡಲು ಗ್ರಾಮದ ಹೊರವಲಯದ ರುದ್ರಭೂಮಿಗೆ ತೆಗೆದುಕೊಂಡು ಹೋಗಿ ಅಂತ್ಯಸAಸ್ಕಾರ ಮಾಡುವ ಸಂದರ್ಭದಲ್ಲಿ ಧೂಪ, ಗಂಧದ ಕಡ್ಡಿ ಹೊಗೆಗೆ ಮರದಲ್ಲಿ ಕಟ್ಟಿದ್ದ ಹೆಜ್ಜೇನು ಎದ್ದು ಅಂತ್ಯಸAಸ್ಕಾರದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರ ಮೇಲೆ ದಾಳಿ ನಡೆಸಿವೆ.
ಹೆಜ್ಜೇನು ದಾಳಿ ಮಾಡುತ್ತಿದ್ದಂತೆಯೇ ಸಾರ್ವಜನಿಕರು ಶವವನ್ನು ಬಿಟ್ಟು ಓಡಿಹೋಗಿದ್ದಾರೆ. ಹೆಜ್ಜೇನು ದಾಳಿಯಿಂದ ಮಹಿಳೆಯರು, ಮಕ್ಕಳು ಸೇರಿದಂತೆ ೪೦ಕ್ಕೂ ಅಧಿಕ ಮಂದಿಗೆ ಗಾಯಕ್ಕೆ ಒಳಗಾಗಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ಸಾರ್ವಜನಿಕರು ತಕ್ಷಣವೇ ಸ್ಥಳೀಯರು ಪಾಂಡವಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ದಾಳಿಗೆ ಒಳಗಾದ ಎಲ್ಲ ಸಾರ್ವಜನಿಕರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಸಾರ್ವಜನಿಕರಿಗೆ ಸಣ್ಣಪಟ್ಟ ಗಾಯಗಳಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲರಿಗೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ.
ಹೆಜ್ಜೇನು ದಾಳಿಯಲ್ಲಿ ಹಾರೋಹಳ್ಳಿ ಗ್ರಾಮದ ರಮೇಶ್, ಸತ್ಯನಾರಾಯಣ್, ವೀಣಾ, ವರುಣ್, ಆನಂದ್, ಪ್ರಜ್ವಲ್, ನೂತನ್ ಸೇರಿದಂತೆ ಹಲವು ಮಂದಿ ಗಾಯಗೊಂಡು ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…