ಮೈಸೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ,ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು.
ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ಪೂಜೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಮುಖಂಡರಾದ ಮಹೇಶ್ ಮಂಜುನಾಥ್ ಕಾಂತಾರಾಜು ತಿಮ್ಮಯ್ಯ ಸೋಮಶೇಖರ್ ಶಿವಕುಮಾರ್ ಸಿದ್ದಲಿಂಗಪ್ಪ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎ.ವೆಂಕಟೇಶ್ , ಪ್ರತಿ ವರ್ಷದಂತೆ ಈ ಬಾರಿಯೂ ಹುಟ್ಟು ಹಬ್ಬ ಆಚರಿಸಿ ಸಿಹಿ ವಿತರಣೆ ಮಾಡಲಾಗಿದೆ.ಡಾ.ಜಿ.ಪರಮೇಶ್ವರ್ ಅವರಿಗೆ ಆರೋಗ್ಯ ಐಶ್ವರ್ಯ ರಾಜಕೀಯ ಸ್ಥಾನಮಾನ ನೀಡಲೆಂದು ಕೋರುತ್ತೇನೆ.ಯಾರನ್ನು ದ್ವೇಷಿಸದೆ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವ ಮನಸ್ಸು. ಕಪ್ಪುಚುಕ್ಕೆ ಇಲ್ಲದೆ ಕೆಲಸ ಮಾಡಿದ ನಾಯಕ.ಮುಂದಿನಚುನಾವಣೆಯಲ್ಲಿ ಪ್ರಣಾಳಿಕೆ ಸಿದ್ದ ಪಡಿಸಲು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ಸಂತೋಷದ ಸಂಗತಿಯಾಗಿದೆ. ಸರ್ವಜನಾಂಗದ ವಿಶ್ವಾಸ ಪಡೆದು ಪ್ರಣಾಳಿಕೆ ತಯಾರು ಮಾಡಲಿದ್ದಾರೆ. ಜನರು ಶಾಂತಿಯಾಗಿ ಬದುಕಲು ಬಿಜೆಪಿ ಸರ್ಕಾರ ಬಿಡುತ್ತಿಲ್ಲ.ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬದೆ ಕಾಲಾಹರಣ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ಬಡವರ ಪಕ್ಷ.ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…