ಮೈಸೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ,ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು.
ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ ಪೂಜೆ ಸಲ್ಲಿಸಿದ ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಮುಖಂಡರಾದ ಮಹೇಶ್ ಮಂಜುನಾಥ್ ಕಾಂತಾರಾಜು ತಿಮ್ಮಯ್ಯ ಸೋಮಶೇಖರ್ ಶಿವಕುಮಾರ್ ಸಿದ್ದಲಿಂಗಪ್ಪ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎ.ವೆಂಕಟೇಶ್ , ಪ್ರತಿ ವರ್ಷದಂತೆ ಈ ಬಾರಿಯೂ ಹುಟ್ಟು ಹಬ್ಬ ಆಚರಿಸಿ ಸಿಹಿ ವಿತರಣೆ ಮಾಡಲಾಗಿದೆ.ಡಾ.ಜಿ.ಪರಮೇಶ್ವರ್ ಅವರಿಗೆ ಆರೋಗ್ಯ ಐಶ್ವರ್ಯ ರಾಜಕೀಯ ಸ್ಥಾನಮಾನ ನೀಡಲೆಂದು ಕೋರುತ್ತೇನೆ.ಯಾರನ್ನು ದ್ವೇಷಿಸದೆ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವ ಮನಸ್ಸು. ಕಪ್ಪುಚುಕ್ಕೆ ಇಲ್ಲದೆ ಕೆಲಸ ಮಾಡಿದ ನಾಯಕ.ಮುಂದಿನಚುನಾವಣೆಯಲ್ಲಿ ಪ್ರಣಾಳಿಕೆ ಸಿದ್ದ ಪಡಿಸಲು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿರುವುದು ಸಂತೋಷದ ಸಂಗತಿಯಾಗಿದೆ. ಸರ್ವಜನಾಂಗದ ವಿಶ್ವಾಸ ಪಡೆದು ಪ್ರಣಾಳಿಕೆ ತಯಾರು ಮಾಡಲಿದ್ದಾರೆ. ಜನರು ಶಾಂತಿಯಾಗಿ ಬದುಕಲು ಬಿಜೆಪಿ ಸರ್ಕಾರ ಬಿಡುತ್ತಿಲ್ಲ.ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬದೆ ಕಾಲಾಹರಣ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಕಾಂಗ್ರೆಸ್ ಬಡವರ ಪಕ್ಷ.ಬಡವರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…