ಜಿಲ್ಲೆಗಳು

ಪೋಷಕರಿಗೆ ಊಟ ಕೊಟ್ಟುಬರಲೆಂದು ಜಮೀನಿಗೆ ಹೋದ ಬಾಲಕಿ ಹಾವು ಕಚ್ಚಿ ಸಾವು

ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ.

ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಾದಯ್ಯ ರವರ ಪುತ್ರಿ ಶ್ರೇಯಾ(16) ಮೃತಪಟ್ಟ ದುರ್ದೈವಿ.

ಘಟನೆಯ ವಿವರ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನ ಹನ್ನೆರಡು ಗಂಟೆ ವೇಳೆ ಊಟ ತೆಗೆದುಕೊಂಡು ಹೋಗುವ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಬಾಲಕಿ ಕಿರುಚಿಕೊಂಡಿದ್ದಾಳೆ ತಕ್ಷಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು 108 ಆಂಬುಲೆನ್ಸ್ ಕರೆ ಮಾಡಿದ್ದಾರೆ ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ದೊರಕದ ಪರಿಣಾಮ ಖಾಸಗಿ ವಾಹನದಲ್ಲಿ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಆದರೂ ಸಹ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯು ಎಂಟನೇ ತರಗತಿ ಓದುತ್ತಿದ್ದು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲಿದ್ದಳು ಎಂಬುದಾಗಿ ತಿಳಿದುಬಂದಿದೆ.
ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ರಾಮಾಪುರ ಪೋಲಿಸರು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಬಾಲಕಿಯ ಶವವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago