ಜಿಲ್ಲೆಗಳು

ಪೋಷಕರಿಗೆ ಊಟ ಕೊಟ್ಟುಬರಲೆಂದು ಜಮೀನಿಗೆ ಹೋದ ಬಾಲಕಿ ಹಾವು ಕಚ್ಚಿ ಸಾವು

ಹನೂರು: ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನದ ಊಟ ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಷಪೂರಿತ ಹಾವೊಂದು ಕಚ್ಚಿ ಬಾಲಕಿ ಮೃತಪಟ್ಟಿರುವ ಘಟನೆ ಕೋಣನಕೆರೆ ಗ್ರಾಮದಲ್ಲಿ ಜರುಗಿದೆ.

ತಾಲ್ಲೂಕಿನ ಕೋಣನಕೆರೆ ಗ್ರಾಮದ ಮಾದಯ್ಯ ರವರ ಪುತ್ರಿ ಶ್ರೇಯಾ(16) ಮೃತಪಟ್ಟ ದುರ್ದೈವಿ.

ಘಟನೆಯ ವಿವರ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಪೋಷಕರಿಗೆ ಮಧ್ಯಾಹ್ನ ಹನ್ನೆರಡು ಗಂಟೆ ವೇಳೆ ಊಟ ತೆಗೆದುಕೊಂಡು ಹೋಗುವ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ಬಾಲಕಿ ಕಿರುಚಿಕೊಂಡಿದ್ದಾಳೆ ತಕ್ಷಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯಲು 108 ಆಂಬುಲೆನ್ಸ್ ಕರೆ ಮಾಡಿದ್ದಾರೆ ಆದರೆ ಸಕಾಲಕ್ಕೆ ಆಂಬ್ಯುಲೆನ್ಸ್ ದೊರಕದ ಪರಿಣಾಮ ಖಾಸಗಿ ವಾಹನದಲ್ಲಿ ಹೋಲಿಕ್ರಾಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ ಆದರೂ ಸಹ ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯು ಎಂಟನೇ ತರಗತಿ ಓದುತ್ತಿದ್ದು ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಮನೆಯಲ್ಲಿದ್ದಳು ಎಂಬುದಾಗಿ ತಿಳಿದುಬಂದಿದೆ.
ಈ ಸಂಬಂಧ ರಾಮಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ರಾಮಾಪುರ ಪೋಲಿಸರು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ಬಾಲಕಿಯ ಶವವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

14 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

14 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago