ಜಿಲ್ಲೆಗಳು

ಪಾರ್ಕುಗಳಲ್ಲಿ ಅರಳಿಮರ ನೆಡುವ ಮೂಲಕ ಮೋದಿಗೆ ಶುಭಕೋರಿದ ಓಬಿಸಿ ಮೋರ್ಚಾ ತಂಡ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಓಬಿಸಿ ಮೋರ್ಚಾ ತಂಡದ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಅರಳಿ ಮರ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ವಾರ್ಡ್ ನಂಬರ್ 30 ರಲ್ಲಿ ಕ್ಯಾತಮಾರನಹಳ್ಳಿ ಗಾಯತ್ರಿ ಪುರಂ ನಲ್ಲಿ ಕಾರ್ಯಕ್ರಮದಲ್ಲಿ ಮೋದಿಜಿ ಅವರಿಗೆ ಶುಭಕೋರುವ ಮೂಲಕ ಸಿಹಿ ಹಂಚಿ ರಾಮದಾಸ್ ಪಾರ್ಕ್ ಹಾಗೂ ಸುಮಾರು 5 ಪಾರ್ಕ್ ಗಳಲ್ಲಿ ಅರಳಿಮರ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಜೊತೆಗೆ ಪೌರಕಾರ್ಮಿಕ ಜಯಂತಿ ಅಂಗವಾಗಿ ಇದೆ ವಾರ್ಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸನ್ಮಾನಿಸಿ ಸಿಹಿ ನೀಡುವ ಮೂಲಕ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಡಾ. ಭಾನುಪ್ರಕಾಶ್, ಬಿಜೆಪಿ ಮುಖಂಡರಾದ ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ, ಮಾಜಿ ಕರ್ನಾಟಕ ವಸ್ತು ಪ್ರಾಧಿಕಾರದ ಅಧ್ಯಕ್ಷರಾದ ಬಿಪಿ ಮಂಜುನಾಥ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಎಚ್ ಜಿ ಗಿರಿಧರ್, ವಾರ್ಡಿನ ನಗರಪಾಲಿಕೆ ಸದಸ್ಯರಾದ ಉಷಾ ನಾರಾಯಣಪ್ಪ, ನಗರ ಪಾಲಿಕೆ ನಾಮನಿರ್ದೇಶಕ ಸದಸ್ಯರಾದ ಆಶಾ ನಾಗ್ಭೂಷಣ್ ಸಿಂಗ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗೌಡ ಮತ್ತು ವೇಲು ಕ್ಷೇತ್ರ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಂಬರೀಶ ಮತ್ತು ವಿಜಯ್ ಹಾಗೂ ಉಪಾಧ್ಯಕ್ಷರು ಕಾರ್ಯದರ್ಶಿಗಳು ಕಾರ್ಯಕಾರಿ ಸದಸ್ಯರು ನಗರ ಓಬಿಸಿ ಪ್ರಧಾನ ಕಾರ್ಯದರ್ಶಿ ಮಣಿರತ್ನಂ ಮತ್ತು ಮಹದೇವ್ ಕೃಷ್ಣಮೂರ್ತಿರಾವ್ ಪ್ರಸಾದ್ ಬ್ರಹ್ಮಚಾರ್ ಜೀವನ್ ಸಹ ಸಂಚಾಲಕರು ಕೆ ಎನ್ ಸ್ವಾಮಿ ಕ್ಷೇತ್ರದ ಪದಾಧಿಕಾರಿಗಳು ಕ್ಷೇತ್ರದ ವಿವಿಧ ಮೋರ್ಚಾದ ಅಧ್ಯಕ್ಷರು ಪದಾಧಿಕಾರಿಗಳು ವಾರ್ಡ್ ಅಧ್ಯಕ್ಷರುಗಳು ನಗರ ಪದಾಧಿಕಾರಿಗಳು ನಗರ ಕಾರ್ಯಕಾರಿ ಸದಸ್ಯರು ಈ ವಾರ್ಡಿನ ಯಜಮಾನರು ಹಿರಿಯ ಮುಖಂಡರು ಎಲ್ಲಾ ಕಾರ್ಯಕರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

9 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

9 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago