ಜಿಲ್ಲೆಗಳು

ಪಾರ್ಕುಗಳಲ್ಲಿ ಅರಳಿಮರ ನೆಡುವ ಮೂಲಕ ಮೋದಿಗೆ ಶುಭಕೋರಿದ ಓಬಿಸಿ ಮೋರ್ಚಾ ತಂಡ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಓಬಿಸಿ ಮೋರ್ಚಾ ತಂಡದ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ಅರಳಿ ಮರ ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ವಾರ್ಡ್ ನಂಬರ್ 30 ರಲ್ಲಿ ಕ್ಯಾತಮಾರನಹಳ್ಳಿ ಗಾಯತ್ರಿ ಪುರಂ ನಲ್ಲಿ ಕಾರ್ಯಕ್ರಮದಲ್ಲಿ ಮೋದಿಜಿ ಅವರಿಗೆ ಶುಭಕೋರುವ ಮೂಲಕ ಸಿಹಿ ಹಂಚಿ ರಾಮದಾಸ್ ಪಾರ್ಕ್ ಹಾಗೂ ಸುಮಾರು 5 ಪಾರ್ಕ್ ಗಳಲ್ಲಿ ಅರಳಿಮರ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಜೊತೆಗೆ ಪೌರಕಾರ್ಮಿಕ ಜಯಂತಿ ಅಂಗವಾಗಿ ಇದೆ ವಾರ್ಡಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸನ್ಮಾನಿಸಿ ಸಿಹಿ ನೀಡುವ ಮೂಲಕ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಡಾ. ಭಾನುಪ್ರಕಾಶ್, ಬಿಜೆಪಿ ಮುಖಂಡರಾದ ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ, ಮಾಜಿ ಕರ್ನಾಟಕ ವಸ್ತು ಪ್ರಾಧಿಕಾರದ ಅಧ್ಯಕ್ಷರಾದ ಬಿಪಿ ಮಂಜುನಾಥ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಎಚ್ ಜಿ ಗಿರಿಧರ್, ವಾರ್ಡಿನ ನಗರಪಾಲಿಕೆ ಸದಸ್ಯರಾದ ಉಷಾ ನಾರಾಯಣಪ್ಪ, ನಗರ ಪಾಲಿಕೆ ನಾಮನಿರ್ದೇಶಕ ಸದಸ್ಯರಾದ ಆಶಾ ನಾಗ್ಭೂಷಣ್ ಸಿಂಗ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗೌಡ ಮತ್ತು ವೇಲು ಕ್ಷೇತ್ರ ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ಅಂಬರೀಶ ಮತ್ತು ವಿಜಯ್ ಹಾಗೂ ಉಪಾಧ್ಯಕ್ಷರು ಕಾರ್ಯದರ್ಶಿಗಳು ಕಾರ್ಯಕಾರಿ ಸದಸ್ಯರು ನಗರ ಓಬಿಸಿ ಪ್ರಧಾನ ಕಾರ್ಯದರ್ಶಿ ಮಣಿರತ್ನಂ ಮತ್ತು ಮಹದೇವ್ ಕೃಷ್ಣಮೂರ್ತಿರಾವ್ ಪ್ರಸಾದ್ ಬ್ರಹ್ಮಚಾರ್ ಜೀವನ್ ಸಹ ಸಂಚಾಲಕರು ಕೆ ಎನ್ ಸ್ವಾಮಿ ಕ್ಷೇತ್ರದ ಪದಾಧಿಕಾರಿಗಳು ಕ್ಷೇತ್ರದ ವಿವಿಧ ಮೋರ್ಚಾದ ಅಧ್ಯಕ್ಷರು ಪದಾಧಿಕಾರಿಗಳು ವಾರ್ಡ್ ಅಧ್ಯಕ್ಷರುಗಳು ನಗರ ಪದಾಧಿಕಾರಿಗಳು ನಗರ ಕಾರ್ಯಕಾರಿ ಸದಸ್ಯರು ಈ ವಾರ್ಡಿನ ಯಜಮಾನರು ಹಿರಿಯ ಮುಖಂಡರು ಎಲ್ಲಾ ಕಾರ್ಯಕರ್ತ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

4 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

5 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

6 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

6 hours ago