ಜಿಲ್ಲೆಗಳು

ಪಾರ್ವತಾಂಬ ಜಾತ್ರೆಯಲ್ಲಿ ಜಾನುವಾರುಗಳಿಗೆ ನಿಷೇಧ

ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ

ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ತಹಸಿಲ್ದಾರ್ ರವಿಶಂಕರ್, ಈ ಬಾರಿ ನಡೆಯಲಿರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜಾನುವಾರುಗಳಿಗೆ ಮತ್ತು ಎತ್ತಿನ ಗಾಡಿಗಳಿಗೆ ನಿಷೇಧ ಹೇರಲಾಗಿದೆ. ರಾಜ್ಯ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಹರಡುವಿಕೆ ಇರುವ ಕಾರಣ ಜಾನುವಾರುಗಳಿಗೆ ನಿಷೇಧ ಹೇರಲಾಗಿದೆ. ಆರೋಗ್ಯಕರ ಜಾನುವಾರುಗಳು ಜಾತ್ರೆಯ ಸಂದರ್ಭದಲ್ಲಿ ಒಂದೇ ಸ್ಥಳದಲ್ಲಿ ಒಟ್ಟುಗೂಡಿದ ಸಂದರ್ಭದಲ್ಲಿ ರೋಗ ಇಲ್ಲದ ಜಾನುವಾರುಗಳಿಗೂ ರೋಗ ಹರಡುವಿಕೆ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಜಾನುವಾರುಗಳಿಗೆ ಜಾತ್ರೆ ಸಂದರ್ಭದಲ್ಲಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ರಥೋತ್ಸವ ಇರುವ ಹಿನ್ನೆಲೆಯಲ್ಲಿ ತೇರನ್ನು ಎಳೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೇರಿನ ಚಕ್ರವನ್ನು ಹಾಗೂ ತೇರನ್ನು ಪರೀಕ್ಷಿಸಿ ಜಾತ್ರಾ ಮಹೋತ್ಸವವನ್ನು ನಡೆಸಬೇಕೆಂದು ಸಂಬಂಧಿಸಿದವರಿಗೆ ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿ ಗುಂಡ್ಲುಪೇಟೆ ಘಟಕದ ವತಿಯಿಂದ ಜಾತ್ರಾ ಸಂದರ್ಭದಲ್ಲಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದ ಅವರು, ಸ್ಥಳದಲ್ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಮೊಕ್ಕಾಂ ಹೂಡಿ ಜಾತ್ರಾ ಸಂದರ್ಭದಲ್ಲಿ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ಪಾರ್ವತಮ್ಮ ಜಾತ್ರಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ, ಖಜಾಂಚಿ ಮಹೇಶ್, ಕಾರ್ಯದರ್ಶಿ ಅಶೋಕ್, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

31 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

32 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

34 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

36 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

44 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

51 mins ago