ಜಿಲ್ಲೆಗಳು

ಪಾರ್ವತಾಂಬ ಜಾತ್ರೆಯಲ್ಲಿ ಜಾನುವಾರುಗಳಿಗೆ ನಿಷೇಧ

ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ

ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ತಹಸಿಲ್ದಾರ್ ರವಿಶಂಕರ್, ಈ ಬಾರಿ ನಡೆಯಲಿರುವ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜಾನುವಾರುಗಳಿಗೆ ಮತ್ತು ಎತ್ತಿನ ಗಾಡಿಗಳಿಗೆ ನಿಷೇಧ ಹೇರಲಾಗಿದೆ. ರಾಜ್ಯ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಹರಡುವಿಕೆ ಇರುವ ಕಾರಣ ಜಾನುವಾರುಗಳಿಗೆ ನಿಷೇಧ ಹೇರಲಾಗಿದೆ. ಆರೋಗ್ಯಕರ ಜಾನುವಾರುಗಳು ಜಾತ್ರೆಯ ಸಂದರ್ಭದಲ್ಲಿ ಒಂದೇ ಸ್ಥಳದಲ್ಲಿ ಒಟ್ಟುಗೂಡಿದ ಸಂದರ್ಭದಲ್ಲಿ ರೋಗ ಇಲ್ಲದ ಜಾನುವಾರುಗಳಿಗೂ ರೋಗ ಹರಡುವಿಕೆ ಸಾಧ್ಯತೆ ಹೆಚ್ಚಾಗಿ ಇರುವುದರಿಂದ ಜಾನುವಾರುಗಳಿಗೆ ಜಾತ್ರೆ ಸಂದರ್ಭದಲ್ಲಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ರಥೋತ್ಸವ ಇರುವ ಹಿನ್ನೆಲೆಯಲ್ಲಿ ತೇರನ್ನು ಎಳೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೇರಿನ ಚಕ್ರವನ್ನು ಹಾಗೂ ತೇರನ್ನು ಪರೀಕ್ಷಿಸಿ ಜಾತ್ರಾ ಮಹೋತ್ಸವವನ್ನು ನಡೆಸಬೇಕೆಂದು ಸಂಬಂಧಿಸಿದವರಿಗೆ ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿ ಗುಂಡ್ಲುಪೇಟೆ ಘಟಕದ ವತಿಯಿಂದ ಜಾತ್ರಾ ಸಂದರ್ಭದಲ್ಲಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದ ಅವರು, ಸ್ಥಳದಲ್ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಮೊಕ್ಕಾಂ ಹೂಡಿ ಜಾತ್ರಾ ಸಂದರ್ಭದಲ್ಲಿ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಪೂರ್ವಭಾವಿ ಸಭೆಯಲ್ಲಿ ಪಾರ್ವತಮ್ಮ ಜಾತ್ರಾ ಸಮಿತಿಯ ಅಧ್ಯಕ್ಷರಾದ ಶಿವಕುಮಾರ, ಖಜಾಂಚಿ ಮಹೇಶ್, ಕಾರ್ಯದರ್ಶಿ ಅಶೋಕ್, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಮುಖಂಡರು, ಗ್ರಾಮಸ್ಥರು ಹಾಗೂ ಸಮಿತಿಯ ಸದಸ್ಯರು ಹಾಜರಿದ್ದರು.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

8 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

8 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

10 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

10 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

10 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

10 hours ago