ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ ಪ್ರಯಾಣಿಕರನ್ನು ಸ್ವಾಗತಿಸಿ ರೈಲಿನ ಚಾಲಕರಿಗೆ ಸನ್ಮಾನಿಸಿ ಸಿಹಿ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರಿಗೆ ಘೋಷಣೆ ಕೂಗಿ ಸಂಭ್ರಮಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ರಾದ ಜೋಗಿಮಂಜು ಮೈಸೂರಿನಿಂದ ಚೆನ್ನೈಗೆ ಕಡಿಮೆ ಅವಧಿಯಲ್ಲಿ ತಲುಪಲಿದ್ದು ಇದರಿಂದ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮೈಸೂರಿನಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ,ಈ ದಿನ ತುಂಬಾ ಸಂತೋಷದ ದಿನ ದಕ್ಷಿಣ ಭಾರತದ ಅಂತರ್ ರಾಜ್ಯ ದ ತಮಿಳು ನಾಡು ಹಾಗೂ ಕರ್ನಾಟಕ ಬಾಂಧವ್ಯ ಇನ್ನೂ ಹೆಚ್ಚಿಸುತ್ತಿದೆ ಹಾಗೇ ಮೈಸೂರು, ಮಂಡ್ಯ,ಹಾಸನ,ಚಾಮರಾಜನಗರ, ಕೊಡಗು ಭಾಗದ ಜನರಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮ,ಕೈಗಾರಿಕೆ ಗೆ ಹೆಚ್ಚು ಪ್ರೊತ್ಸಾಹ ಹೆಚ್ಚಾಗುತ್ತದೆ,ಈ ರೈಲು ಕೇವಲ 1.30 ನಿಮಿಷ ಕ್ಕೆ ಬೆಂಗಳೂರು ತಲುಪುತ್ತವೆ, ಈ ಕಾರ್ಯಕ್ಕೆ ಹೆಚ್ಚು ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಜೀ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರವರಿಗೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ,ಕೇಬಲ್ ಮಹೇಶ್ ,ಅಪೂರ್ವ ಸುರೇಶ್ ,ಸಂದೇಶ ,ಅಜಯ್ ಶಾಸ್ತ್ರಿ ,ಪ್ರಮೋದ್ ಗೌಡ, ಉಮೇಶ್,ರವಿತೇಜಾ,ಸುರೇಂದ್ರ, ಶಿವಪ್ರಕಾಶ್, ನಂದಕುಮಾರ್, ಸಂದೀಪ್ , ಶರತ್ ,ಮಹೇಂದ್ರ ಶೈವ ,ಧರ್ಮೇಂದ್ರ ,ಹಾಗೂ ಇನ್ನಿತರರು ಹಾಜರಿದ್ದರು
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…
ಪ್ರಶಾಂತ್ ಎಸ್. ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…
ಮಂಜು ಕೋಟೆ ಎಚ್.ಡಿ.ಕೋಟೆ : ಕಠಿಣ ಶ್ರಮವಹಿಸಿ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿದರೆ ಅತ್ಯುನ್ನತ ಹುದ್ದೆ ಪಡೆಯಬಹುದು ಎಂಬುದಕ್ಕೆ ಪಟ್ಟಣದ ನಿವಾಸಿ…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…