ಜಿಲ್ಲೆಗಳು

ಪ್ರಯಾಣಿಕರಿಗೆ ಸಿಹಿ ವಿತರಿಸಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಸ್ವಾಗತ

ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ ಪ್ರಯಾಣಿಕರನ್ನು ಸ್ವಾಗತಿಸಿ ರೈಲಿನ ಚಾಲಕರಿಗೆ ಸನ್ಮಾನಿಸಿ ಸಿಹಿ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರಿಗೆ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ರಾದ ಜೋಗಿಮಂಜು ಮೈಸೂರಿನಿಂದ ಚೆನ್ನೈಗೆ ಕಡಿಮೆ ಅವಧಿಯಲ್ಲಿ ತಲುಪಲಿದ್ದು ಇದರಿಂದ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮೈಸೂರಿನಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ,ಈ ದಿನ ತುಂಬಾ ಸಂತೋಷದ ದಿನ ದಕ್ಷಿಣ ಭಾರತದ ಅಂತರ್ ರಾಜ್ಯ ದ ತಮಿಳು ನಾಡು ಹಾಗೂ ಕರ್ನಾಟಕ ಬಾಂಧವ್ಯ ಇನ್ನೂ ಹೆಚ್ಚಿಸುತ್ತಿದೆ ಹಾಗೇ ಮೈಸೂರು, ಮಂಡ್ಯ,ಹಾಸನ,ಚಾಮರಾಜನಗರ, ಕೊಡಗು ಭಾಗದ ಜನರಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮ,ಕೈಗಾರಿಕೆ ಗೆ ಹೆಚ್ಚು ಪ್ರೊತ್ಸಾಹ ಹೆಚ್ಚಾಗುತ್ತದೆ,ಈ ರೈಲು ಕೇವಲ 1.30 ನಿಮಿಷ ಕ್ಕೆ ಬೆಂಗಳೂರು ತಲುಪುತ್ತವೆ, ಈ ಕಾರ್ಯಕ್ಕೆ ಹೆಚ್ಚು ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಜೀ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರವರಿಗೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ,ಕೇಬಲ್ ಮಹೇಶ್ ,ಅಪೂರ್ವ ಸುರೇಶ್ ,ಸಂದೇಶ ,ಅಜಯ್ ಶಾಸ್ತ್ರಿ ,ಪ್ರಮೋದ್ ಗೌಡ, ಉಮೇಶ್,ರವಿತೇಜಾ,ಸುರೇಂದ್ರ, ಶಿವಪ್ರಕಾಶ್, ನಂದಕುಮಾರ್, ಸಂದೀಪ್ , ಶರತ್ ,ಮಹೇಂದ್ರ ಶೈವ ,ಧರ್ಮೇಂದ್ರ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

35 mins ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

49 mins ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

1 hour ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

1 hour ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago