ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ ಪ್ರಯಾಣಿಕರನ್ನು ಸ್ವಾಗತಿಸಿ ರೈಲಿನ ಚಾಲಕರಿಗೆ ಸನ್ಮಾನಿಸಿ ಸಿಹಿ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರಿಗೆ ಘೋಷಣೆ ಕೂಗಿ ಸಂಭ್ರಮಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ರಾದ ಜೋಗಿಮಂಜು ಮೈಸೂರಿನಿಂದ ಚೆನ್ನೈಗೆ ಕಡಿಮೆ ಅವಧಿಯಲ್ಲಿ ತಲುಪಲಿದ್ದು ಇದರಿಂದ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮೈಸೂರಿನಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ,ಈ ದಿನ ತುಂಬಾ ಸಂತೋಷದ ದಿನ ದಕ್ಷಿಣ ಭಾರತದ ಅಂತರ್ ರಾಜ್ಯ ದ ತಮಿಳು ನಾಡು ಹಾಗೂ ಕರ್ನಾಟಕ ಬಾಂಧವ್ಯ ಇನ್ನೂ ಹೆಚ್ಚಿಸುತ್ತಿದೆ ಹಾಗೇ ಮೈಸೂರು, ಮಂಡ್ಯ,ಹಾಸನ,ಚಾಮರಾಜನಗರ, ಕೊಡಗು ಭಾಗದ ಜನರಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮ,ಕೈಗಾರಿಕೆ ಗೆ ಹೆಚ್ಚು ಪ್ರೊತ್ಸಾಹ ಹೆಚ್ಚಾಗುತ್ತದೆ,ಈ ರೈಲು ಕೇವಲ 1.30 ನಿಮಿಷ ಕ್ಕೆ ಬೆಂಗಳೂರು ತಲುಪುತ್ತವೆ, ಈ ಕಾರ್ಯಕ್ಕೆ ಹೆಚ್ಚು ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಜೀ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರವರಿಗೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ,ಕೇಬಲ್ ಮಹೇಶ್ ,ಅಪೂರ್ವ ಸುರೇಶ್ ,ಸಂದೇಶ ,ಅಜಯ್ ಶಾಸ್ತ್ರಿ ,ಪ್ರಮೋದ್ ಗೌಡ, ಉಮೇಶ್,ರವಿತೇಜಾ,ಸುರೇಂದ್ರ, ಶಿವಪ್ರಕಾಶ್, ನಂದಕುಮಾರ್, ಸಂದೀಪ್ , ಶರತ್ ,ಮಹೇಂದ್ರ ಶೈವ ,ಧರ್ಮೇಂದ್ರ ,ಹಾಗೂ ಇನ್ನಿತರರು ಹಾಜರಿದ್ದರು
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…