ಜಿಲ್ಲೆಗಳು

ಪ್ರಯಾಣಿಕರಿಗೆ ಸಿಹಿ ವಿತರಿಸಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಸ್ವಾಗತ

ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ ಪ್ರಯಾಣಿಕರನ್ನು ಸ್ವಾಗತಿಸಿ ರೈಲಿನ ಚಾಲಕರಿಗೆ ಸನ್ಮಾನಿಸಿ ಸಿಹಿ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರಿಗೆ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ರಾದ ಜೋಗಿಮಂಜು ಮೈಸೂರಿನಿಂದ ಚೆನ್ನೈಗೆ ಕಡಿಮೆ ಅವಧಿಯಲ್ಲಿ ತಲುಪಲಿದ್ದು ಇದರಿಂದ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮೈಸೂರಿನಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ,ಈ ದಿನ ತುಂಬಾ ಸಂತೋಷದ ದಿನ ದಕ್ಷಿಣ ಭಾರತದ ಅಂತರ್ ರಾಜ್ಯ ದ ತಮಿಳು ನಾಡು ಹಾಗೂ ಕರ್ನಾಟಕ ಬಾಂಧವ್ಯ ಇನ್ನೂ ಹೆಚ್ಚಿಸುತ್ತಿದೆ ಹಾಗೇ ಮೈಸೂರು, ಮಂಡ್ಯ,ಹಾಸನ,ಚಾಮರಾಜನಗರ, ಕೊಡಗು ಭಾಗದ ಜನರಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮ,ಕೈಗಾರಿಕೆ ಗೆ ಹೆಚ್ಚು ಪ್ರೊತ್ಸಾಹ ಹೆಚ್ಚಾಗುತ್ತದೆ,ಈ ರೈಲು ಕೇವಲ 1.30 ನಿಮಿಷ ಕ್ಕೆ ಬೆಂಗಳೂರು ತಲುಪುತ್ತವೆ, ಈ ಕಾರ್ಯಕ್ಕೆ ಹೆಚ್ಚು ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಜೀ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರವರಿಗೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ,ಕೇಬಲ್ ಮಹೇಶ್ ,ಅಪೂರ್ವ ಸುರೇಶ್ ,ಸಂದೇಶ ,ಅಜಯ್ ಶಾಸ್ತ್ರಿ ,ಪ್ರಮೋದ್ ಗೌಡ, ಉಮೇಶ್,ರವಿತೇಜಾ,ಸುರೇಂದ್ರ, ಶಿವಪ್ರಕಾಶ್, ನಂದಕುಮಾರ್, ಸಂದೀಪ್ , ಶರತ್ ,ಮಹೇಂದ್ರ ಶೈವ ,ಧರ್ಮೇಂದ್ರ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago