ಜಿಲ್ಲೆಗಳು

ಪ್ರಯಾಣಿಕರಿಗೆ ಸಿಹಿ ವಿತರಿಸಿ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಸ್ವಾಗತ

ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ ಪ್ರಯಾಣಿಕರನ್ನು ಸ್ವಾಗತಿಸಿ ರೈಲಿನ ಚಾಲಕರಿಗೆ ಸನ್ಮಾನಿಸಿ ಸಿಹಿ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರಿಗೆ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ರಾದ ಜೋಗಿಮಂಜು ಮೈಸೂರಿನಿಂದ ಚೆನ್ನೈಗೆ ಕಡಿಮೆ ಅವಧಿಯಲ್ಲಿ ತಲುಪಲಿದ್ದು ಇದರಿಂದ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮೈಸೂರಿನಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ,ಈ ದಿನ ತುಂಬಾ ಸಂತೋಷದ ದಿನ ದಕ್ಷಿಣ ಭಾರತದ ಅಂತರ್ ರಾಜ್ಯ ದ ತಮಿಳು ನಾಡು ಹಾಗೂ ಕರ್ನಾಟಕ ಬಾಂಧವ್ಯ ಇನ್ನೂ ಹೆಚ್ಚಿಸುತ್ತಿದೆ ಹಾಗೇ ಮೈಸೂರು, ಮಂಡ್ಯ,ಹಾಸನ,ಚಾಮರಾಜನಗರ, ಕೊಡಗು ಭಾಗದ ಜನರಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮ,ಕೈಗಾರಿಕೆ ಗೆ ಹೆಚ್ಚು ಪ್ರೊತ್ಸಾಹ ಹೆಚ್ಚಾಗುತ್ತದೆ,ಈ ರೈಲು ಕೇವಲ 1.30 ನಿಮಿಷ ಕ್ಕೆ ಬೆಂಗಳೂರು ತಲುಪುತ್ತವೆ, ಈ ಕಾರ್ಯಕ್ಕೆ ಹೆಚ್ಚು ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಜೀ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರವರಿಗೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ,ಕೇಬಲ್ ಮಹೇಶ್ ,ಅಪೂರ್ವ ಸುರೇಶ್ ,ಸಂದೇಶ ,ಅಜಯ್ ಶಾಸ್ತ್ರಿ ,ಪ್ರಮೋದ್ ಗೌಡ, ಉಮೇಶ್,ರವಿತೇಜಾ,ಸುರೇಂದ್ರ, ಶಿವಪ್ರಕಾಶ್, ನಂದಕುಮಾರ್, ಸಂದೀಪ್ , ಶರತ್ ,ಮಹೇಂದ್ರ ಶೈವ ,ಧರ್ಮೇಂದ್ರ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago