ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ ಪ್ರಯಾಣಿಕರನ್ನು ಸ್ವಾಗತಿಸಿ ರೈಲಿನ ಚಾಲಕರಿಗೆ ಸನ್ಮಾನಿಸಿ ಸಿಹಿ ವಿತರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ಪ್ರತಾಪ್ ಸಿಂಹ ರವರಿಗೆ ಘೋಷಣೆ ಕೂಗಿ ಸಂಭ್ರಮಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ರಾದ ಜೋಗಿಮಂಜು ಮೈಸೂರಿನಿಂದ ಚೆನ್ನೈಗೆ ಕಡಿಮೆ ಅವಧಿಯಲ್ಲಿ ತಲುಪಲಿದ್ದು ಇದರಿಂದ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮೈಸೂರಿನಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಾರೆ ,ಈ ದಿನ ತುಂಬಾ ಸಂತೋಷದ ದಿನ ದಕ್ಷಿಣ ಭಾರತದ ಅಂತರ್ ರಾಜ್ಯ ದ ತಮಿಳು ನಾಡು ಹಾಗೂ ಕರ್ನಾಟಕ ಬಾಂಧವ್ಯ ಇನ್ನೂ ಹೆಚ್ಚಿಸುತ್ತಿದೆ ಹಾಗೇ ಮೈಸೂರು, ಮಂಡ್ಯ,ಹಾಸನ,ಚಾಮರಾಜನಗರ, ಕೊಡಗು ಭಾಗದ ಜನರಿಗೆ ಹಾಗೂ ಈ ಭಾಗದ ಪ್ರವಾಸೋದ್ಯಮ,ಕೈಗಾರಿಕೆ ಗೆ ಹೆಚ್ಚು ಪ್ರೊತ್ಸಾಹ ಹೆಚ್ಚಾಗುತ್ತದೆ,ಈ ರೈಲು ಕೇವಲ 1.30 ನಿಮಿಷ ಕ್ಕೆ ಬೆಂಗಳೂರು ತಲುಪುತ್ತವೆ, ಈ ಕಾರ್ಯಕ್ಕೆ ಹೆಚ್ಚು ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ , ಜೀ ಹಾಗೂ ಸಂಸದ ಪ್ರತಾಪ್ ಸಿಂಹ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ರವರಿಗೆ ಅಭಿನಂದನೆಗಳು ಸಲ್ಲಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಯುವ ಭಾರತ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು ,ಕೇಬಲ್ ಮಹೇಶ್ ,ಅಪೂರ್ವ ಸುರೇಶ್ ,ಸಂದೇಶ ,ಅಜಯ್ ಶಾಸ್ತ್ರಿ ,ಪ್ರಮೋದ್ ಗೌಡ, ಉಮೇಶ್,ರವಿತೇಜಾ,ಸುರೇಂದ್ರ, ಶಿವಪ್ರಕಾಶ್, ನಂದಕುಮಾರ್, ಸಂದೀಪ್ , ಶರತ್ ,ಮಹೇಂದ್ರ ಶೈವ ,ಧರ್ಮೇಂದ್ರ ,ಹಾಗೂ ಇನ್ನಿತರರು ಹಾಜರಿದ್ದರು
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…