ಕೆ.ಆರ್.ಆಸ್ಪತ್ರೆಯಲ್ಲಿ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ
ಮೈಸೂರು: ಬೆಳಕಿನ ಹಬ್ಬ ದೀಪಾವಳಿ ವೇಳೆಯಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ನಗರದ ದೊಡ್ಡಾಸ್ಪತ್ರೆ ಸಜ್ಜಾಗಿದ್ದು, ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು ಸೇವೆ ಒದಗಿಸಲು ವೈದ್ಯರು, ಶುಶ್ರೂಷಕರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ವೈದ್ಯ ಹಾಗೂ ವೈದ್ಯೇತರ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ಕಳೆದ ಬಾರಿ ಜಿಲ್ಲೆಯಲ್ಲಿ ೭ ಮಂದಿ ಪಟಾಕಿ ಸಿಡಿತದಿಂದ ತೀವ್ರ ಗಾಯಗೊಂಡಿದ್ದರು. ೧೦ ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಅವರೆಲ್ಲ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಮುಂಜಾಗ್ರತೆ ಕ್ರಮಗಳು
* ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಜತೆಯಲ್ಲಿರಬೇಕು
* ಪಟಾಕಿ ಹಚ್ಚಲು ಮಕ್ಕಳಿಗೆ ಉದ್ದದ ಅಗರಬತ್ತಿ ನೀಡಬೇಕು
* ಪಟಾಕಿ ಸಿಡಿಸುವವಾಗ ಕಾಟನ್ ಬಟ್ಟೆಗಳನ್ನು ಧರಿಸಬೇಕು
* ಪಟಾಕಿ ಹಚ್ಚಿ ಪರೀಕ್ಷಿಸುವ ಕುತೂಹಲ ಬೇಡ
* ಕೈಯಲ್ಲಿ ಹಿಡಿದು ಪಟಾಕಿ ಹಚ್ಚುವ ಸಾಹಸ ಬೇಡ
* ಬಾಂಬ್ಗಳು ಹಾಗೂ ಪ್ಲವರ್ ಪಾಟ್ಸ್, ರಾಕೆಟ್ ಹೆಚ್ಚು ಹಾನಿ
* ಪಟಾಕಿ ಕಿಡಿ ಕಣ್ಣಿಗೆ ಬಡಿದಾಗ ಉಜ್ಜಿಕೊಳ್ಳಬಾರದು, ತಕ್ಷಣ ತಣ್ಣೀರಿನಿಂದ ತೊಳೆಯಬೇಕು ನಂತರ ಸಮೀಪದ ಕಣ್ಣಿನ ಆಸ್ಪತ್ರೆ ಹೋಗಿ ಚಿಕಿತ್ಸೆ ಪಡೆಯಬೇಕು.
ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲು ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಆರಂಭಿಸುವ ಜತೆಗೆ ೫೦ರಿಂದ ೬೦ ಬೆಡ್ಗಳನ್ನು ಮೀಸಲಿಡಲಾಗಿದೆ. ಸುಮಾರು ೧೨ ಮಂದಿ ತಜ್ಞ ವೈದ್ಯರು, ೩೦ ಪಿಜಿ ವೈದ್ಯರು, ನರ್ಸ್ಗಳು, ಡಿ ಗ್ರೂಪ್ ನೌಕರರು ಸೇವೆಗೆ ಸಜ್ಜಾಗಿದ್ದಾರೆ. ಚಿಕಿತ್ಸೆಗೆ ಅಗತ್ಯ ಔಷಧ, ಶಸ್ತ್ರಚಿಕಿತ್ಸೆ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ.
–ಡಾ.ಸತೀಶ್ ಕುಮಾರ್, ಮುಖ್ಯಸ್ಥರು, ಕೆ.ಆರ್.ಆಸ್ಪತ್ರೆಯ ಕಣ್ಣಿನ ವಿಭಾಗ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…