ಜಿಲ್ಲೆಗಳು

ಪಟಾಕಿ ಸಿಡಿತ; ಗಾಯಗೊಂಡವರ ಚಿಕಿತ್ಸೆಗೆ ದೊಡ್ಡಾಸ್ಪತ್ರೆ ಸಜ್ಜು

ಕೆ.ಆರ್.ಆಸ್ಪತ್ರೆಯಲ್ಲಿ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ

ಮೈಸೂರು: ಬೆಳಕಿನ ಹಬ್ಬ ದೀಪಾವಳಿ ವೇಳೆಯಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ನಗರದ ದೊಡ್ಡಾಸ್ಪತ್ರೆ ಸಜ್ಜಾಗಿದ್ದು, ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು ಸೇವೆ ಒದಗಿಸಲು ವೈದ್ಯರು, ಶುಶ್ರೂಷಕರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ವೈದ್ಯ ಹಾಗೂ ವೈದ್ಯೇತರ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ಕಳೆದ ಬಾರಿ ಜಿಲ್ಲೆಯಲ್ಲಿ ೭ ಮಂದಿ ಪಟಾಕಿ ಸಿಡಿತದಿಂದ ತೀವ್ರ ಗಾಯಗೊಂಡಿದ್ದರು. ೧೦ ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಅವರೆಲ್ಲ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಮುಂಜಾಗ್ರತೆ ಕ್ರಮಗಳು
* ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಜತೆಯಲ್ಲಿರಬೇಕು
* ಪಟಾಕಿ ಹಚ್ಚಲು ಮಕ್ಕಳಿಗೆ ಉದ್ದದ ಅಗರಬತ್ತಿ ನೀಡಬೇಕು
* ಪಟಾಕಿ ಸಿಡಿಸುವವಾಗ ಕಾಟನ್ ಬಟ್ಟೆಗಳನ್ನು ಧರಿಸಬೇಕು
* ಪಟಾಕಿ ಹಚ್ಚಿ ಪರೀಕ್ಷಿಸುವ ಕುತೂಹಲ ಬೇಡ
* ಕೈಯಲ್ಲಿ ಹಿಡಿದು ಪಟಾಕಿ ಹಚ್ಚುವ ಸಾಹಸ ಬೇಡ
* ಬಾಂಬ್‌ಗಳು ಹಾಗೂ ಪ್ಲವರ್ ಪಾಟ್ಸ್, ರಾಕೆಟ್ ಹೆಚ್ಚು ಹಾನಿ
* ಪಟಾಕಿ ಕಿಡಿ ಕಣ್ಣಿಗೆ ಬಡಿದಾಗ ಉಜ್ಜಿಕೊಳ್ಳಬಾರದು, ತಕ್ಷಣ ತಣ್ಣೀರಿನಿಂದ ತೊಳೆಯಬೇಕು ನಂತರ ಸಮೀಪದ ಕಣ್ಣಿನ ಆಸ್ಪತ್ರೆ ಹೋಗಿ ಚಿಕಿತ್ಸೆ ಪಡೆಯಬೇಕು.


ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲು ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಆರಂಭಿಸುವ ಜತೆಗೆ ೫೦ರಿಂದ ೬೦ ಬೆಡ್‌ಗಳನ್ನು ಮೀಸಲಿಡಲಾಗಿದೆ. ಸುಮಾರು ೧೨ ಮಂದಿ ತಜ್ಞ ವೈದ್ಯರು, ೩೦ ಪಿಜಿ ವೈದ್ಯರು, ನರ್ಸ್‌ಗಳು, ಡಿ ಗ್ರೂಪ್ ನೌಕರರು ಸೇವೆಗೆ ಸಜ್ಜಾಗಿದ್ದಾರೆ. ಚಿಕಿತ್ಸೆಗೆ ಅಗತ್ಯ ಔಷಧ, ಶಸ್ತ್ರಚಿಕಿತ್ಸೆ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ.
ಡಾ.ಸತೀಶ್ ಕುಮಾರ್, ಮುಖ್ಯಸ್ಥರು, ಕೆ.ಆರ್.ಆಸ್ಪತ್ರೆಯ ಕಣ್ಣಿನ ವಿಭಾಗ.

andolanait

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

5 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

6 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

6 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

7 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

7 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 hours ago