ಜಿಲ್ಲೆಗಳು

ಪಟಾಕಿ ಸಿಡಿತ; ಗಾಯಗೊಂಡವರ ಚಿಕಿತ್ಸೆಗೆ ದೊಡ್ಡಾಸ್ಪತ್ರೆ ಸಜ್ಜು

ಕೆ.ಆರ್.ಆಸ್ಪತ್ರೆಯಲ್ಲಿ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ

ಮೈಸೂರು: ಬೆಳಕಿನ ಹಬ್ಬ ದೀಪಾವಳಿ ವೇಳೆಯಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳನ್ನು ತಡೆಯಲು ನಗರದ ದೊಡ್ಡಾಸ್ಪತ್ರೆ ಸಜ್ಜಾಗಿದ್ದು, ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪಟಾಕಿ ಸಿಡಿತದ ಗಾಯಾಳುಗಳಿಗೆ ತುರ್ತು ಸೇವೆ ಒದಗಿಸಲು ವೈದ್ಯರು, ಶುಶ್ರೂಷಕರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ವೈದ್ಯ ಹಾಗೂ ವೈದ್ಯೇತರ ಸಿಬ್ಬಂದಿ ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ಕಳೆದ ಬಾರಿ ಜಿಲ್ಲೆಯಲ್ಲಿ ೭ ಮಂದಿ ಪಟಾಕಿ ಸಿಡಿತದಿಂದ ತೀವ್ರ ಗಾಯಗೊಂಡಿದ್ದರು. ೧೦ ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಅವರೆಲ್ಲ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

ಮುಂಜಾಗ್ರತೆ ಕ್ರಮಗಳು
* ಮಕ್ಕಳು ಪಟಾಕಿ ಸಿಡಿಸುವಾಗ ಹಿರಿಯರು ಜತೆಯಲ್ಲಿರಬೇಕು
* ಪಟಾಕಿ ಹಚ್ಚಲು ಮಕ್ಕಳಿಗೆ ಉದ್ದದ ಅಗರಬತ್ತಿ ನೀಡಬೇಕು
* ಪಟಾಕಿ ಸಿಡಿಸುವವಾಗ ಕಾಟನ್ ಬಟ್ಟೆಗಳನ್ನು ಧರಿಸಬೇಕು
* ಪಟಾಕಿ ಹಚ್ಚಿ ಪರೀಕ್ಷಿಸುವ ಕುತೂಹಲ ಬೇಡ
* ಕೈಯಲ್ಲಿ ಹಿಡಿದು ಪಟಾಕಿ ಹಚ್ಚುವ ಸಾಹಸ ಬೇಡ
* ಬಾಂಬ್‌ಗಳು ಹಾಗೂ ಪ್ಲವರ್ ಪಾಟ್ಸ್, ರಾಕೆಟ್ ಹೆಚ್ಚು ಹಾನಿ
* ಪಟಾಕಿ ಕಿಡಿ ಕಣ್ಣಿಗೆ ಬಡಿದಾಗ ಉಜ್ಜಿಕೊಳ್ಳಬಾರದು, ತಕ್ಷಣ ತಣ್ಣೀರಿನಿಂದ ತೊಳೆಯಬೇಕು ನಂತರ ಸಮೀಪದ ಕಣ್ಣಿನ ಆಸ್ಪತ್ರೆ ಹೋಗಿ ಚಿಕಿತ್ಸೆ ಪಡೆಯಬೇಕು.


ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲು ಕೆ.ಆರ್.ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಆರಂಭಿಸುವ ಜತೆಗೆ ೫೦ರಿಂದ ೬೦ ಬೆಡ್‌ಗಳನ್ನು ಮೀಸಲಿಡಲಾಗಿದೆ. ಸುಮಾರು ೧೨ ಮಂದಿ ತಜ್ಞ ವೈದ್ಯರು, ೩೦ ಪಿಜಿ ವೈದ್ಯರು, ನರ್ಸ್‌ಗಳು, ಡಿ ಗ್ರೂಪ್ ನೌಕರರು ಸೇವೆಗೆ ಸಜ್ಜಾಗಿದ್ದಾರೆ. ಚಿಕಿತ್ಸೆಗೆ ಅಗತ್ಯ ಔಷಧ, ಶಸ್ತ್ರಚಿಕಿತ್ಸೆ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ.
ಡಾ.ಸತೀಶ್ ಕುಮಾರ್, ಮುಖ್ಯಸ್ಥರು, ಕೆ.ಆರ್.ಆಸ್ಪತ್ರೆಯ ಕಣ್ಣಿನ ವಿಭಾಗ.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

2 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

4 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

10 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

10 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

10 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

10 hours ago