ಜಿಲ್ಲೆಗಳು

ಪಟ್ಟಣ ಪಂಚಾಯಿತಿಯಿಂದ ಸಿಗದ ಸಮರ್ಪಕ ಅನುದಾನ : ಜೆಡಿಎಸ್ ಸದಸ್ಯರ ಪ್ರತಿಭಟನೆ

ಹನೂರು: ಜೆಡಿಎಸ್ ಸದಸ್ಯರುಗಳ ವಾರ್ಡ್ ಗಳಿಗೆ ಪಟ್ಟಣ ಪಂಚಾಯಿತಿಯ ಯಾವುದೇ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಕಳೆದ 2 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ವಾರ್ಡ್ ಗಳಿಗೆ ಲಕ್ಷ ಲಕ್ಷ ಅನುದಾನವನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ ವಿರೋಧ ಪಕ್ಷದ ಸದಸ್ಯರು ಎಂಬ ಕಾರಣಕ್ಕೆ ನಮಗೆ ಅನುದಾನ ನೀಡದೇ ಇರುವುದರಿಂದ ವಾರ್ಡ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ನಾವು ವಿಫಲರಾಗಿದ್ದೇವೆ. ವಾರ್ಡಗಳಲ್ಲಿ ತಿರುಗಾಡಲು ಸಾಧ್ಯವಾಗದೆ ತಪ್ಪಿಸಿಕೊಂಡು ಓಡಾಡುವ ಪರಿಸ್ಥಿತಿ ಬಂದೊದಗಿದೆ.ಎಂದು 13 ನೇ ವಾರ್ಡ್ ನ ಸದಸ್ಯ ಮಹೇಶ್ ಆರೋಪಿಸಿದರು.
ಎಂಟನೇ ವಾರ್ಡ್ ನ ಸದಸ್ಯ ಆನಂದ್ ಕುಮಾರ್ ಮಾತನಾಡಿ ನಾನು ಸದಸ್ಯನಾಗಿ ಆಯ್ಕೆಯಾದ ದಿನದಿಂದ ಇದುವರೆಗೆ ನನ್ನ ವಾರ್ಡ್ ಗೆ ಒಂದೇ ಒಂದು ರೂ ಅನುದಾನ ನೀಡಿಲ್ಲ ಇದು ಎಷ್ಟರ ಮಟ್ಟಿಗೆ ಸರಿ? ನನ್ನ ವಾರ್ಡ್ ನಲ್ಲಿ ಯಾವುದೇ ಸಮಸ್ಯೆಗಳಿಲ್ಲವೇ ಚರಂಡಿಗಳಲ್ಲಿ ಕಸ ಕಡ್ಡಿ ತುಂಬಿಕೊಂಡು ಗಬ್ಬು ನಾರುತ್ತಿದೆ,ಸಮರ್ಪಕ ನೀರಿನ ಪೂರೈಕೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧ್ಯಕ್ಷೆ ಚಂದ್ರಮ್ಮ ಮಾತನಾಡಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನವನ್ನು ಎಲ್ಲಾ ವಾರ್ಡ್ ಗಳಿಗೆ ಸಮನಾಗಿ ಹಂಚಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಎಲ್ಲಾ ಸದಸ್ಯರು ಸಹಕರಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಸದಸ್ಯರುಗಳಾದ ಹರೀಶ್ ಕುಮಾರ್, ಸುದೇಶ್, ಮಂಜುಳಾ, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಪವಿತ್ರ,ರೂಪ, ನಾಮ ನಿರ್ದೇಶಿತ ಸದಸ್ಯ ಪುಟ್ಟರಾಜು ಮುಖ್ಯಾಧಿಕಾರಿ ಪರಶಿವಯ್ಯ,ಸಿಬ್ಬಂದಿಗಳಾದ ಬಾಲಸುಬ್ರಮಣ್ಯ, ದ್ವಿತೀಯ ದರ್ಜೆ ಸಹಾಯಕ ಮಾದೇಶ್,ಪರಶಿವಮೂರ್ತಿ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಹಾಜರಿದ್ದರು.

andolanait

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

5 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

5 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

6 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

6 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

22 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 day ago