ಜಿಲ್ಲೆಗಳು

ಪಟ್ಟಣ ಪಂಚಾಯಿತಿಯಿಂದ ಸಿಗದ ಸಮರ್ಪಕ ಅನುದಾನ : ಜೆಡಿಎಸ್ ಸದಸ್ಯರ ಪ್ರತಿಭಟನೆ

ಹನೂರು: ಜೆಡಿಎಸ್ ಸದಸ್ಯರುಗಳ ವಾರ್ಡ್ ಗಳಿಗೆ ಪಟ್ಟಣ ಪಂಚಾಯಿತಿಯ ಯಾವುದೇ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಕಳೆದ 2 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ವಾರ್ಡ್ ಗಳಿಗೆ ಲಕ್ಷ ಲಕ್ಷ ಅನುದಾನವನ್ನು ಹೆಚ್ಚಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ ವಿರೋಧ ಪಕ್ಷದ ಸದಸ್ಯರು ಎಂಬ ಕಾರಣಕ್ಕೆ ನಮಗೆ ಅನುದಾನ ನೀಡದೇ ಇರುವುದರಿಂದ ವಾರ್ಡ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ನಾವು ವಿಫಲರಾಗಿದ್ದೇವೆ. ವಾರ್ಡಗಳಲ್ಲಿ ತಿರುಗಾಡಲು ಸಾಧ್ಯವಾಗದೆ ತಪ್ಪಿಸಿಕೊಂಡು ಓಡಾಡುವ ಪರಿಸ್ಥಿತಿ ಬಂದೊದಗಿದೆ.ಎಂದು 13 ನೇ ವಾರ್ಡ್ ನ ಸದಸ್ಯ ಮಹೇಶ್ ಆರೋಪಿಸಿದರು.
ಎಂಟನೇ ವಾರ್ಡ್ ನ ಸದಸ್ಯ ಆನಂದ್ ಕುಮಾರ್ ಮಾತನಾಡಿ ನಾನು ಸದಸ್ಯನಾಗಿ ಆಯ್ಕೆಯಾದ ದಿನದಿಂದ ಇದುವರೆಗೆ ನನ್ನ ವಾರ್ಡ್ ಗೆ ಒಂದೇ ಒಂದು ರೂ ಅನುದಾನ ನೀಡಿಲ್ಲ ಇದು ಎಷ್ಟರ ಮಟ್ಟಿಗೆ ಸರಿ? ನನ್ನ ವಾರ್ಡ್ ನಲ್ಲಿ ಯಾವುದೇ ಸಮಸ್ಯೆಗಳಿಲ್ಲವೇ ಚರಂಡಿಗಳಲ್ಲಿ ಕಸ ಕಡ್ಡಿ ತುಂಬಿಕೊಂಡು ಗಬ್ಬು ನಾರುತ್ತಿದೆ,ಸಮರ್ಪಕ ನೀರಿನ ಪೂರೈಕೆಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧ್ಯಕ್ಷೆ ಚಂದ್ರಮ್ಮ ಮಾತನಾಡಿ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನವನ್ನು ಎಲ್ಲಾ ವಾರ್ಡ್ ಗಳಿಗೆ ಸಮನಾಗಿ ಹಂಚಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಎಲ್ಲಾ ಸದಸ್ಯರು ಸಹಕರಿಸಿ ಎಂದು ಮನವಿ ಮಾಡಿದರು.

ಇದೇ ವೇಳೆ ಸದಸ್ಯರುಗಳಾದ ಹರೀಶ್ ಕುಮಾರ್, ಸುದೇಶ್, ಮಂಜುಳಾ, ಮಹೇಶ್ ನಾಯ್ಕ, ಮುಮ್ತಾಜ್ ಬಾನು, ಪವಿತ್ರ,ರೂಪ, ನಾಮ ನಿರ್ದೇಶಿತ ಸದಸ್ಯ ಪುಟ್ಟರಾಜು ಮುಖ್ಯಾಧಿಕಾರಿ ಪರಶಿವಯ್ಯ,ಸಿಬ್ಬಂದಿಗಳಾದ ಬಾಲಸುಬ್ರಮಣ್ಯ, ದ್ವಿತೀಯ ದರ್ಜೆ ಸಹಾಯಕ ಮಾದೇಶ್,ಪರಶಿವಮೂರ್ತಿ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಹಾಜರಿದ್ದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago