ಜಿಲ್ಲೆಗಳು

ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ

ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮoದಿರದ ಆವರಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಯಾನಕ್ಕೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸಿದ ಚೀಲವನ್ನು ಶಾಸಕರು ಸಮರ್ಪಿಸಿ, ಅಭಿಯಾನಕ್ಕೆ ಶುಭ ಹಾರೈಸಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಸೇರಿದಂತೆ ಗಣ್ಯರು ಕೆಂಪೇಗೌಡರ ರಥಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago