ಮೈಸೂರು : ರಾಜ್ಯದಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿರುವ ಪೇಸಿಎಂ ಅಭಿಯಾನಕ್ಕೆ ನಗರದಲ್ಲಿಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಅವರು ಪೋಸ್ಟರ್ ಅಂಟಿಸುವ ಮೂಲಕ ಚಾಲನೆ ನೀಡಿದರು.
ನಗರದ ಜೆ.ಕೆ.ಮೈದಾನದ ಕಾಂಪೌಂಡ್ಗೆ ಪೇಸಿಎಂ ಪೋಸ್ಟರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ಸಂಸರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಕೆಪಿಸಿಸಿ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ,
ಮುಖಂಡರಾದ ಶಫಿ, ಗಿರೀಶ್, ಮಹೇಶ್ ಮತ್ತಿತರ ಮುಖಂಡರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಪೇ ಸಿಎಂ ಅಭಿಯಾನವನ್ನು ನೆನ್ನೆಯಿಂದ ಜಿಲ್ಲಾ ಮಟ್ಟದಲ್ಲೂ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 10 ಸಾವಿರ ಪೋಸ್ಟರ್ ಗಳನ್ನು ಪೂರೈಸುತ್ತಿದೆ. ಬಿಜೆಪಿಯೊಂದಿಗೆ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆವರೆಗೂ ಇದೇ ರೀತಿಯ ಆಕ್ರಮಣಕಾರಿಯ ಪ್ರಚಾರ ತಂತ್ರಗಳನ್ನು ರೂಪಿಸಲು ಯೋಜಿಸಿದೆ.
ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಆಪರೇಷನ್ ಕಮಲಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಗೋಡೆಗಳ ಮೇಲೆ ಇದೇ ರೀತಿಯ ಕೆಲವು ಪೋಸ್ಟರ್ ಗಳು
ಕಂಡುಬಂದಿದ್ದವು. ಆಗ ಯಡಿಯೂರಪ್ಪ ಹೆಚ್ಚು ತಲೆ ಕೆಡಿಸಿಕೊಳ್ಳದೆ ನಿರ್ಲಕ್ಷಿಸಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…