ಮೈಸೂರು : ರಾಜ್ಯದಾದ್ಯಂತ ಸಾಕಷ್ಟು ಚರ್ಚೆಯಾಗುತ್ತಿರುವ ಪೇಸಿಎಂ ಅಭಿಯಾನಕ್ಕೆ ನಗರದಲ್ಲಿಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಅವರು ಪೋಸ್ಟರ್ ಅಂಟಿಸುವ ಮೂಲಕ ಚಾಲನೆ ನೀಡಿದರು.
ನಗರದ ಜೆ.ಕೆ.ಮೈದಾನದ ಕಾಂಪೌಂಡ್ಗೆ ಪೇಸಿಎಂ ಪೋಸ್ಟರ್ ಅಂಟಿಸುವ ಮೂಲಕ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ಸಂಸರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಕೆಪಿಸಿಸಿ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ,
ಮುಖಂಡರಾದ ಶಫಿ, ಗಿರೀಶ್, ಮಹೇಶ್ ಮತ್ತಿತರ ಮುಖಂಡರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಪೇ ಸಿಎಂ ಅಭಿಯಾನವನ್ನು ನೆನ್ನೆಯಿಂದ ಜಿಲ್ಲಾ ಮಟ್ಟದಲ್ಲೂ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 10 ಸಾವಿರ ಪೋಸ್ಟರ್ ಗಳನ್ನು ಪೂರೈಸುತ್ತಿದೆ. ಬಿಜೆಪಿಯೊಂದಿಗೆ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಮುಂದಿನ ವಿಧಾನಸಭೆ ಚುನಾವಣೆವರೆಗೂ ಇದೇ ರೀತಿಯ ಆಕ್ರಮಣಕಾರಿಯ ಪ್ರಚಾರ ತಂತ್ರಗಳನ್ನು ರೂಪಿಸಲು ಯೋಜಿಸಿದೆ.
ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಆಪರೇಷನ್ ಕಮಲಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಗೋಡೆಗಳ ಮೇಲೆ ಇದೇ ರೀತಿಯ ಕೆಲವು ಪೋಸ್ಟರ್ ಗಳು
ಕಂಡುಬಂದಿದ್ದವು. ಆಗ ಯಡಿಯೂರಪ್ಪ ಹೆಚ್ಚು ತಲೆ ಕೆಡಿಸಿಕೊಳ್ಳದೆ ನಿರ್ಲಕ್ಷಿಸಿದ್ದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…